Breaking News

ಬಿಜೆಪಿ ಆಡಳಿತ ಯಂತ್ರದ ದುರ್ಬಳಕೆಯಿಂದ ಕಾಂಗ್ರೆಸ್ ಸೋಲು: ಶಿವಾನಂದ ಪಾಟೀಲ

Spread the love

ವಿಜಯಪುರ: ದುಡ್ಡು ಹಂಚಿ ಗೆದ್ದಿರುವ ಚುನಾವಣೆ ಇದು. ದುಡ್ಡು ಪ್ರಭಾವ ಬೀರಿದೆ. ಆಡಳಿತ ಯಂತ್ರದ ದುರ್ಬಳಕೆ ಮಾಡಿಕೊಂಡು ಬಿಜೆಪಿ ಗೆಲುವು ಸಾಧಿಸಿದೆ ಎಂದು ಬಸವನ ಬಾಗೇವಾಡಿ ಕಾಂಗ್ರೆಸ್ ಶಾಸಕ ಶಿವಾನಂದ ಪಾಟೀಲ ಪ್ರತಿಕ್ರಿಯಿಸಿದ್ದಾರೆ.

ಸಿಂದಗಿ ಉಪ ಚುನಾವಣೆ ಫಲಿತಾಂಶದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಂದಗಿ ಕ್ಷೇತ್ರದಲ್ಲಿ ಅಧಿಕಾರದ ದುರ್ಬಳಕೆ, ಹಣ ಬಲವನ್ನೆಲ್ಲ ಮೀರಿ ಕಾಂಗ್ರೆಸ್ ಪರ ಮತ ಹಾಕಿದ ಕ್ಷೇತ್ರದ ಎಲ್ಲ ಮತದಾರರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

 

ಸಿಂದಗಿ ಕಾಂಗ್ರೆಸ್ ಪಕ್ಷದ ಭಿನ್ನಾಭಿಪ್ರಾಯಕ್ಕಿಂತ ಬಿಜೆಪಿ ಆಡಳಿತ ಯಂತ್ರದ ದುರ್ಬಳಕೆ ನಮ್ಮ ಸೋಲಿಗೆ ಕಾರಣವಾಗಿದೆ. ಕೆಪಿಸಿಸಿ ಇಡೀ ತಂಡ ಕೆಲಸ ಮಾಡಿದ್ದರಿಂದ ಹಿಂದಿನ 3-4 ಚುನಾವಣೆಯಲ್ಲಿ 23 ಸಾವಿರ ಮತ ಪಡೆಯುತ್ತಿದ್ದ ನಾವು, ಉಪ ಚುನಾವಣೆಯಲ್ಲಿ 60 ಸಾವಿರ ಮತಕ್ಕೆ ಏರಿದ್ದೇವೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸುಲಭವಾಗಿಸಿದೆ ಎಂದರು.


Spread the love

About Laxminews 24x7

Check Also

ವಿಜಯಪುರ ಡಿಸಿಯಾಗಿ ಡಾ. ಆನಂದ.ಕೆ ವರ್ಗಾವಣೆ

Spread the love ವಿಜಯಪುರ ಡಿಸಿಯಾಗಿ ಡಾ. ಆನಂದ.ಕೆ ವರ್ಗಾವಣೆ ವಿಜಯಪುರ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರನ್ನು ರಾಜ್ಯ ಸರ್ಕಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ