ಸೋಲಿಗೆ ನಾನೊಬ್ಬನೇ ಕಾರಣನಲ್ಲ
ಉಪ ಚುನಾವಣೆಯ ಫಲಿತಾಂಶ ಮುಂದಿನ ಸಾರ್ವತ್ರಿಕ ಚುನಾವಣೆಗೆ ದಿಕ್ಸೂಚಿಯಾಗುವುದಿಲ್ಲ. ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸಿದ್ದು ಸೋಲಿನ ಹೊಣೆಯನ್ನು ಎಲ್ಲರೂ ಹೊರುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ. ಹುಬ್ಬಳ್ಳಿಗೆ ಆಗಮಿಸಿದ ಸಂದರ್ಭದಲ್ಲಿ ಮಾತನಾಡಿದ ಅವರು, ಹಾನಗಲ್ ಉಪ ಚುನಾವಣೆಯಲ್ಲಿ ಬಿಜೆಪಿಗೆ ಸೋಲಾಗಿದೆ. ಸೋಲಿಗೆ ನಾನೊಬ್ಬನೇ ಕಾರಣನಲ್ಲ. ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಮಾಡಿದ್ದೇವೆ. ಸೋಲಿನ ಹೊಣೆಯನ್ನು ಎಲ್ಲರೂ ಸಾಮೂಹಿಕವಾಗಿ ಹೊರುತ್ತೇವೆ ಎಂದರು.
ನಮ್ಮ ಕೇಂದ್ರದ ನಾಯಕ ಅಮಿತ್ ಶಾ ನನ್ನ ಹೆಸರು ಹೇಳಿದಾಗಲೇ ಹೇಳಿದ್ದೆ. ನಾನು ಒಬ್ಬ ತಂಡದ ಮುಖ್ಯಸ್ಥ ಇರಬಹುದು. ಆದ್ರೂ ಸಾಮೂಹಿಕ ನಾಯಕತ್ವದಲ್ಲೇ ಚುನಾವಣೆ ಮಾಡುತ್ತೇವೆ ಎಂದಿದ್ದೆ. ಈಗಲೂ ಅದನ್ನೇ ಹೇಳುತ್ತೇನೆ. ಉದಾಸಿ ಇದ್ದಾಗಲೂ ಒಮ್ಮೆ ಬಿಜೆಪಿ – ಒಮ್ಮೆ ಕಾಂಗ್ರೆಸ್ ಗೆದ್ದು ಬರುತ್ತಿತ್ತು. ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆಯವರು ಕೋವಿಡ್ ಸಂದರ್ಭದಲ್ಲಿ ಮಾಡಿದ ಜನಪರ ಕೆಲಸಗಳನ್ನು ಜನರು ಬೆಂಬಲಿಸಿದ್ದಾ