Breaking News

ಅಭಿಮಾನಿಗಳ ಸಾವಿನಿಂದ ನೊಂದಿರುವ ಅಪ್ಪು ಪತ್ನಿ ಅಶ್ವಿನಿ ತುಂಬ ನೊಂದಿದ್ದಾರೆ ಎಂದ ರಾಘವೆಂದ್ರ ರಾಜ್​ಕುಮಾರ್​

Spread the love

ಬೆಂಗಳೂರು: ಪುನೀತ್​ ಅಕಾಲಿಕ ನಿಧನದಿಂದ ಅಪ್ಪು ಅಭಿಮಾನಿಗಳ ಸರಣಿ ಆತ್ಮಹತ್ಯೆ ಮುಂದುವರೆದಿದೆ. ಇದು ದೊಡ್ಮನೆ ಕುಟುಂಬಕ್ಕೆ ಭಾರೀ ನೋವು ತಂದಿದೆ. ಅಭಿಮಾನಿಗಳ ಸಾವಿನಿಂದ ನೊಂದಿರುವ ಅಪ್ಪು ಪತ್ನಿ ಅಶ್ವಿನಿ ತುಂಬ ನೊಂದಿದ್ದಾರೆ ಎಂದು ರಾಘವೆಂದ್ರ ರಾಜ್​ಕುಮಾರ್​ ತಿಳಿಸಿದ್ದಾರೆ

ಅಪ್ಪು ಅಭಿಮಾನಿಗಳ ಸರಣಿ ಆತ್ಮಹತ್ಯೆ ಕುರಿತು ಬೇಸರ ವ್ಯಕ್ತಪಡಿಸಿದ ರಾಘಣ್ಣ ನಿಮ್ಮ ಮನೆಯಲ್ಲಿ ಯಾರಾದರು ಸತ್ತರೆ ನೀವು ಸಾಯಬೇಕೆಂದು ಹೇಳಿ ಕೊಡ್ತಾರಾ?

ನಾಳೆ ನಿಮ್ಮ ಮನೆಯವರು ಅಪ್ಪು ಸಾವಿನಿಂದ ಹೀಗಾಯ್ತು ಅಂತ ಮಾತಾಡ್ತಾರೆ. ಅದರಿಂದ ನಮಗೂ ಒಳ್ಳೆದಾಗಲ್ಲ. ಈಗಾಗಲೇ ನೋವಿನಲ್ಲಿದ್ದೀವಿ, ದಯವಿಟ್ಟು ಮತ್ತೆ ನಮಗೆ ನೋವು ಕೊಡಬೇಡಿ ಎಂದಿದ್ದಾರೆ.

ಇನ್ನು 12 ಅಭಿಮಾನಿಗಳ ಸಾವಿಗೆ ನನ್ನ ಪತಿ ಕಾರಣ ಅಂತ ಪುನೀತ್ ಪತ್ನಿ ಅಶ್ವಿನಿ ಬೇಸರ ಮಾಡ್ಕೊಂಡಿದ್ದಾರೆ. ಹೀಗಾಗಿ ಅವರು ನಾ ಹೊರಗಡೆ ಬರಲ್ಲ ರಾಘಣ್ಣ ಎಂದು ಹೇಳುತ್ತಿದ್ದಾರೆ. ಪರಿಸ್ಥಿತಿ ಹೀಗಿರುವಾಗ ನಿಮ್ಮ ಪಾದಕ್ಕೆ ನಮಸ್ಕಾರ ಮಾಡ್ತೀನಿ ಯಾರು ದಯವಿಟ್ಟು ಆತ್ಮಹತ್ಯೆಯಂತಹ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ ಎಂದು ರಾಘಣ್ಣ ಬೇಡಿಕೊಂಡಿದ್ದಾರೆ.


Spread the love

About Laxminews 24x7

Check Also

ಕರ್ನಾಟಕ ಹವಾಮಾನ ವರದಿ: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಲಘು ಮಳೆಯ ಸೂಚನೆ

Spread the loveಬೆಂಗಳೂರು: ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವೇ ಆವರಿಸಿದ್ದು, ಇನ್ನು ಕೆಲ ದಿನಗಳಲ್ಲಿ ಬೆಂಗಳೂರು ಬಿಸಿಲಿನ ಬೇಗೆಯಿಂದ ತತ್ತರಿಸಲಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ