Breaking News

ಅಭಿಮಾನಿಗಳ ಸಾವಿನಿಂದ ನೊಂದಿರುವ ಅಪ್ಪು ಪತ್ನಿ ಅಶ್ವಿನಿ ತುಂಬ ನೊಂದಿದ್ದಾರೆ ಎಂದ ರಾಘವೆಂದ್ರ ರಾಜ್​ಕುಮಾರ್​

Spread the love

ಬೆಂಗಳೂರು: ಪುನೀತ್​ ಅಕಾಲಿಕ ನಿಧನದಿಂದ ಅಪ್ಪು ಅಭಿಮಾನಿಗಳ ಸರಣಿ ಆತ್ಮಹತ್ಯೆ ಮುಂದುವರೆದಿದೆ. ಇದು ದೊಡ್ಮನೆ ಕುಟುಂಬಕ್ಕೆ ಭಾರೀ ನೋವು ತಂದಿದೆ. ಅಭಿಮಾನಿಗಳ ಸಾವಿನಿಂದ ನೊಂದಿರುವ ಅಪ್ಪು ಪತ್ನಿ ಅಶ್ವಿನಿ ತುಂಬ ನೊಂದಿದ್ದಾರೆ ಎಂದು ರಾಘವೆಂದ್ರ ರಾಜ್​ಕುಮಾರ್​ ತಿಳಿಸಿದ್ದಾರೆ

ಅಪ್ಪು ಅಭಿಮಾನಿಗಳ ಸರಣಿ ಆತ್ಮಹತ್ಯೆ ಕುರಿತು ಬೇಸರ ವ್ಯಕ್ತಪಡಿಸಿದ ರಾಘಣ್ಣ ನಿಮ್ಮ ಮನೆಯಲ್ಲಿ ಯಾರಾದರು ಸತ್ತರೆ ನೀವು ಸಾಯಬೇಕೆಂದು ಹೇಳಿ ಕೊಡ್ತಾರಾ?

ನಾಳೆ ನಿಮ್ಮ ಮನೆಯವರು ಅಪ್ಪು ಸಾವಿನಿಂದ ಹೀಗಾಯ್ತು ಅಂತ ಮಾತಾಡ್ತಾರೆ. ಅದರಿಂದ ನಮಗೂ ಒಳ್ಳೆದಾಗಲ್ಲ. ಈಗಾಗಲೇ ನೋವಿನಲ್ಲಿದ್ದೀವಿ, ದಯವಿಟ್ಟು ಮತ್ತೆ ನಮಗೆ ನೋವು ಕೊಡಬೇಡಿ ಎಂದಿದ್ದಾರೆ.

ಇನ್ನು 12 ಅಭಿಮಾನಿಗಳ ಸಾವಿಗೆ ನನ್ನ ಪತಿ ಕಾರಣ ಅಂತ ಪುನೀತ್ ಪತ್ನಿ ಅಶ್ವಿನಿ ಬೇಸರ ಮಾಡ್ಕೊಂಡಿದ್ದಾರೆ. ಹೀಗಾಗಿ ಅವರು ನಾ ಹೊರಗಡೆ ಬರಲ್ಲ ರಾಘಣ್ಣ ಎಂದು ಹೇಳುತ್ತಿದ್ದಾರೆ. ಪರಿಸ್ಥಿತಿ ಹೀಗಿರುವಾಗ ನಿಮ್ಮ ಪಾದಕ್ಕೆ ನಮಸ್ಕಾರ ಮಾಡ್ತೀನಿ ಯಾರು ದಯವಿಟ್ಟು ಆತ್ಮಹತ್ಯೆಯಂತಹ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ ಎಂದು ರಾಘಣ್ಣ ಬೇಡಿಕೊಂಡಿದ್ದಾರೆ.


Spread the love

About Laxminews 24x7

Check Also

ಆರೋಗ್ಯ ಮತ್ತು ಫಿಟ್ನೆಸ್ ಕಡೆ ಗಮನ ಹರಿಸಿದರೆ ಜೀವನದಲ್ಲಿ ಸದಾಕಾಲ ಸಂತೋಷದಿಂದ ಇರಬಹುದು ಎಂದು ಮೈಸೂರಿನಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹೇಳಿದರು.

Spread the loveಮೈಸೂರು: ಜೀವನದಲ್ಲಿ ಸಂಪಾದನೆ ಮುಖ್ಯ. ಅದರೆ ಜೊತೆಯಲ್ಲಿ ನೆಮ್ಮದಿಯಾಗಿರಲು ಆರೋಗ್ಯವನ್ನೂ ಸಂಪಾದಿಸಬೇಕು ಎಂದು ಬಾಲಿವುಡ್ ನಟಿ ಶಿಲ್ಪ ಶೆಟ್ಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ