Breaking News

ಪುನೀತ್ ರಾಜಕುಮಾರ್ ಅವರ ಹಠಾತ್ ಸಾವಿನ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ವ್ಯಕ್ತವಾಗಿರುವ ಆಗ್ರಹ

Spread the love

ಬೆಂಗಳೂರು: ಪುನೀತ್ ರಾಜಕುಮಾರ್ ಅವರ ಹಠಾತ್ ಸಾವಿನ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ವ್ಯಕ್ತವಾಗಿರುವ ಆಗ್ರಹದ ಬೆನ್ನಿಗೇ ಅವರ ಸಾವಿಗೆ ಸಂಬಂಧಿಸಿ ಮತ್ತೊಂದು ಅನುಮಾನ ಮೂಡಿದ್ದು, ಆ ಕುರಿತು ಪೊಲೀಸರಿಗೆ ದೂರು ಕೂಡ ನೀಡಲಾಗಿದೆ.

 

ಪುನೀತ್ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ, ಡಾ.ರಾಜ್​ ಕುಟುಂಬದ ವೈದ್ಯ ಡಾ. ರಮಣ ರಾವ್ ಕ್ಲಿನಿಕ್ ವಿರುದ್ಧ ತನಿಖೆ ನಡೆಸುವಂತೆ ಸದಾಶಿವನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಪುನೀತ್ ಅವರ ಅಭಿಮಾನಿ ಎಂದು ಹೇಳಿಕೊಂಡಿರುವ, ಕುರುಬರಹಳ್ಳಿಯ ಅರುಣ್​ ಪರಮೇಶ್ವರ್ ಎಂಬವರು ಈ ದೂರು ನೀಡಿದ್ದಾರೆ.

 

ಪುನೀತ್ ರಾಜಕುಮಾರ್ ಅವರು ಮನೆಯಿಂದ ಡಾ.ರಮಣ ರಾವ್ ಕ್ಲಿನಿಕ್​ಗೆ ಹೋಗುವಾಗ ಆರಾಮಾಗಿಯೇ ಹೋಗಿರುತ್ತಾರೆ. ಆದರೆ ಅಲ್ಲಿಂದ ವಿಕ್ರಮ್​ ಆಸ್ಪತ್ರೆಗೆ ಹೋಗಲು ಯಾಕೆ ತಡವಾಯಿತು? ಅವರು ಅಷ್ಟು ತುರ್ತು ಪರಿಸ್ಥಿತಿಯಲ್ಲಿದ್ದರೂ ಯಾಕೆ ಅವರನ್ನು ಆಂಬುಲೆನ್ಸ್​ನಲ್ಲಿ ವಿಕ್ರಮ್ ಆಸ್ಪತ್ರೆಗೆ ಕಳಿಸಿಲ್ಲ? ಎಂದೆಲ್ಲ ದೂರಿನಲ್ಲಿ ಪ್ರಶ್ನಿಸಲಾಗಿದೆ.

ಅಂದು ಕ್ಲಿನಿಕ್​​ನಲ್ಲಿ ನಡೆದ ಘಟನಾವಳಿಗಳ ಕುರಿತ ಸಿಸಿಟಿವಿ ಕ್ಲಿಪ್ಪಿಂಗ್​ ಯಾಕೆ ಮಾಧ್ಯಮಗಳಿಗೆ ನೀಡುತ್ತಿಲ್ಲ? ಅಲ್ಲಿನ ವೈದ್ಯರ ನಿರ್ಲಕ್ಷ್ಯವೇ ಪುನೀತ್ ಸಾವಿಗೆ ಕಾರಣವೇ? ಎಂದೂ ಪ್ರಶ್ನಿಸಲಾಗಿದ್ದು, ಅಪ್ಪು ಸಾವಿನ ಕುರಿತು ಕೆಲವು ಗೊಂದಲಗಳಿವೆ ಎಂದು ಉಲ್ಲೇಖಿಸಲಾಗಿದೆ. ಹೀಗಾಗಿ ಅವರ ಸಾವಿನ ಕುರಿತು ತನಿಖೆ ನಡೆಸಬೇಕು ಎಂದು ಅರುಣ್​ ದೂರು ನೀಡಿದ್ದಾರೆ.

ಅರುಣ್ ನೀಡಿರುವ ದೂರನ್ನು ಸ್ವೀಕರಿಸಿರುವುದಾಗಿ ಸದಾಶಿವನಗರ ಪೊಲೀಸರು ತಿಳಿಸಿದ್ದಾರೆ. ಆದರೆ ಆ ಕುರಿತಂತೆ ಮುಂದಿನ ಪ್ರಕ್ರಿಯೆ ನಡೆದಿಲ್ಲ. ಈ ರೀತಿಯ ಆರೋಪಗಳಿಗೆ ಸಂಬಂಧಿಸಿದಂತೆ ಪುನೀತ್ ಕುಟುಂಬಸ್ಥರು ದೂರು ನೀಡಿದರಷ್ಟೇ ಪ್ರಕರಣ ದಾಖಲಾಗುವ ಸಾಧ್ಯತೆ ಇರುತ್ತದೆ ಎನ್ನಲಾಗಿದೆ.


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ