Breaking News

ಕಳೆದ ಎರಡು ವರ್ಷಗಳ ಕಬ್ಬಿನ ಬಾಕಿ ಬಿಲ್ ಸೇರಿದಂತೆ, ಪ್ರಸಕ್ತ ಸಾಲಿನ ದರ ಘೋಷಿಸದಿದ್ದಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸಿದರು.

Spread the love

ಬಾಗಲಕೋಟೆ: ಬಾಕಿ ಹಣ ಮತ್ತು ದರ ನಿಗದಿ ಮಾಡದ ಹಿನ್ನೆಲೆಯಲ್ಲಿ ನಿರಾಣಿ ಸಕ್ಕರೆ ಕಾರ್ಖಾನೆಯ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿ, ಕಾರ್ಖಾನೆ ಆವರಣದಿಂದ ಕಬ್ಬಿನ ಟ್ರ್ಯಾಕ್ಟರ್​ಗಳನ್ನು ಹೊರ ತರಲು ಮುಂದಾದ ಘಟನೆ ಬಾಗಲಕೋಟೆ ಜಿಲ್ಲೆ ಮುಧೋಳ ಬಳಿ ಇರುವ ಸಕ್ಕರೆ ಕಾರ್ಖಾನೆಯಲ್ಲಿ ಬುಧವಾರ ನಡೆದಿದೆ.

ಕಳೆದ ಎರಡು ವರ್ಷಗಳ ಕಬ್ಬಿನ ಬಾಕಿ ಬಿಲ್ ಸೇರಿದಂತೆ, ಪ್ರಸಕ್ತ ಸಾಲಿನ ದರ ಘೋಷಿಸದಿದ್ದಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸಿದರು.

ಕಳೆದ ಸಾಲಿನ ಬಾಕಿ ಹಣ ಮತ್ತು ಪ್ರಸಕ್ತ ಸಾಲಿನ ದರ ನಿಗದಿ ಮಾಡಬೇಕೆಂದು ಒತ್ತಾಯಿಸಿದರು. ದರ ನಿಗದಿಗೊಳಿಸುವರೆಗೂ ಕಾರ್ಖಾನೆ ಆರಂಭಿಸಬಾರದು ಎಂದು ಪಟ್ಟು ಹಿಡಿದರು. ಘಟನಾ ಸ್ಥಳಕ್ಕೆ ಮುಧೋಳ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಕ್ಕರೆ ಕಾರ್ಖಾನೆಯು ಸಚಿವ ಮುರುಗೇಶ ನಿರಾಣಿ ಒಡೆತನದಲ್ಲಿದೆ. ಬಾಕಿ ಹಣ ಮತ್ತು ದರ ನಿಗದಿ ಮಾಡುವವರೆಗೂ ಕಾಖಾ೯ನೆ ಆರಂಭಿಸಬಾರದು ಎಂದು ಕಬ್ಬು ಬೆಳೆಗಾರ ರೈತರು ಒತ್ತಾಯಿಸುತ್ತಿದ್ದಾರೆ. ಕಾಖಾ೯ನೆ ಸುತ್ತಮುತ್ತ ಗೊಂದಲದ ವಾತಾವರಣ ನಿರ್ಮಾಣವಾಗಿದೆ.

ಬಾಕಿ ಪಾವತಿಗೆ ಸರ್ಕಾರ ಸೂಚನೆ
ಕರ್ನಾಟಕದ 7 ಸಕ್ಕರೆ ಕಾರ್ಖಾನೆಗಳು ರೈತರಿಗೆ ಒಟ್ಟು ₹ 42 ಕೋಟಿ ಪಾವತಿಸುವುದನ್ನು ಬಾಕಿ ಉಳಿಸಿಕೊಂಡಿವೆ. ಶೀಘ್ರ ಬಾಕಿ ಪಾವತಿಸಬೇಕು ಎಂದು ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಈಚೆಗೆ ತಾಕೀತು ಮಾಡಿದ್ದರು. ಪ್ರಸ್ತಕ ಸಾಲಿನಲ್ಲಿ ಸಾಲಿನಲ್ಲಿ ಕಬ್ಬು ಅರೆಯುವಿಕೆ ಪ್ರಾರಂಭಿಸಲು ಪೂರ್ವ ಸಿದ್ಧತಾ ಯೋಜನೆಗಳು, ಕಾರ್ಖಾನೆಗಳ ಕಾರ್ಯ, ದೊರೆಯಬಹುದಾದ ಕಬ್ಬಿನ ಲಭ್ಯತೆಯನ್ನೂ ಸಚಿವರು ಚರ್ಚಿಸಿದ್ದರು.

 


Spread the love

About Laxminews 24x7

Check Also

ಹಠಾತ್​ ಸಾವು ಅಧಿಸೂಚಿತ ಕಾಯಿಲೆ, ಮರಣೋತ್ತರ ಪರೀಕ್ಷೆ ಕಡ್ಡಾಯ: ಸಚಿವ ದಿನೇಶ್​ ಗುಂಡೂರಾವ್

Spread the loveಬೆಂಗಳೂರು: ಕೋವಿಡ್​​ ಲಸಿಕೆಯಿಂದ ಹೃದಯಾಘಾತ ಸಂಭವಿಸುತ್ತಿಲ್ಲ ಎಂಬುದು ವರದಿಯಲ್ಲಿ ಗೊತ್ತಾಗಿದೆ. ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ.ರವೀಂದ್ರನಾಥ್ ನೇತೃತ್ವದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ