Breaking News

ಬೆಳಗಾವಿ: ಓಡಿ ಹೋಗಿ ಬಸ್ ಹತ್ತಲು ಹೋಗಿ ಕೆಳಗೆ ಬಿದ್ದ ಬಾಲಕ ಅಸ್ವಸ್ಥ

Spread the love

ಓಡಿ ಹೋಗಿ ಬಸ್ ಹತ್ತಲು ಹೋಗಿದ್ದ ವೇಳೆ ಬಾಲಕನೊರ್ವ ಬಸ್‍ನಿಂದ ಬಿದ್ದು ಗಾಯಗೊಂಡಿರುವ ಘಟನೆ ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದಿದೆ.

ಹೌದು ಪಂತ್ ಬಾಳೇಕುಂದ್ರಿಗೆ ಹೋಗುವ ಕೆಎಸ್‍ಆರ್‍ಟಿಸಿ ಬಸ್ ಹತ್ತುವ ವೇಳೆ ನೂಕು ನುಗ್ಗಲು ಉಂಟಾಗಿದೆ. ಈ ವೇಳೆ ಓಡಿ ಹೋಗಿ ಬಸ್ ಹತ್ತಲು ಹೋದ ಬಾಲಕ ಕೆಳಗೆ ಬಿದ್ದು ಅಸ್ವಸ್ಥನಾಗಿದ್ದಾನೆ. ನಂತರ ಆತನನ್ನು ಅಲ್ಲಿದ್ದ ಸ್ಥಳೀಯರು ಎತ್ತಿಕೊಂಡು ಪ್ಲಾಟ್‍ಫಾರ್ಮನ ಕಟ್ಟೆಯ ಮೇಲೆ ಮಲಗಿಸಿ ನೀರು ಕುಡಿಸಿ, ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ. ಅಸ್ವಸ್ಥಗೊಂಡಿದ್ದ ಬಾಲಕನ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಈ ರೀತಿ ಪದೇ ಪದೇ ಘಟನೆಗಳು ಸಂಭವಿಸುತ್ತಿವೆ, ಆದರೂ ಕೂಡ ಸಾರಿಗೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಈ ರೀತಿ ಬಸ್ ಹತ್ತುವ ವೇಳೆ ಬಿದ್ದು ಜೀವಕ್ಕೆ ಏನಾದರು ಕುತ್ತು ಆದರೆ ಯಾರು ಹೊಣೆ ಎಂಬುದು ಯಕ್ಷಪ್ರಶ್ನೆಯಾಗಿ ಕಾಡುತ್ತಿದೆ.


Spread the love

About Laxminews 24x7

Check Also

ಸಚಿವ ಸಂಪುಟ ವಿಸ್ತರಣೆಗೆ ಸೋಮವಾರ ಶುಭ ಮುಹೂರ್ತ? – ಹೈಕಮಾಂಡ್ ಮುಂದೆ 2 ದಿನಾಂಕ ಪ್ರಸ್ತಾಪಿಸಿದ ಡಿಕೆಶಿ

Spread the loveನವದೆಹಲಿ: ಸಚಿವ ಸಂಪುಟ ವಿಸ್ತರಣೆ ಕಸರತ್ತು ನಡೆಯುತ್ತಿರುವ ಹೊತ್ತಿನಲ್ಲೇ ʻಕೈʼ ಶಾಸಕರ ದೆಹಲಿ  ಪರೇಡ್ ಶುರುವಾಗಿದೆ. ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ