Breaking News

ರಮೇಶ್ ಜಾರಕಿಹೊಳಿ ಬಸವರಾಜ ಬೊಮ್ಮಾಯಿ ಅವರನ್ನ ಭೇಟಿ ಮಾಡಿದ್ದು ಯಾಕೆ…?

Spread the love

ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿಗೆದರಿದ್ದು, ಟಿಕೆಟ್ ಆಕಾಂಕ್ಷಿಗಳ ಲಾಬಿ ಜೋರಾಗಿದೆ.

ಸಹೋದರ ಲಖನ್ ಜಾರಕಿಹೊಳಿಗೆ ಪರಿಷತ್ ಟಿಕೆಟ್ ಕೊಡಿಸುವ ನಿಟ್ಟಿನಲ್ಲಿ ಇದೀಗ ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಬೆಂಗಳೂರಿನ ಆರ್.ಟಿ.ನಗರ ನಿವಾಸದಲ್ಲಿ ಅರ್ಧಗಂಟೆಗೂ ಹೆಚ್ಚು ಕಾಲ ಸಿಎಂ ಜೊತೆ ರಮೇಶ್ ಜಾರಕಿಹೊಳಿ ಚರ್ಚೆ ನಡೆಸಿದ್ದಾರೆ.

ಮೊನ್ನೆ ದೆಹಲಿಯ ಕರ್ನಾಟಕ ಭವನದಲ್ಲಿ ಕೂಡ ರಮೇಶ್, ಸಿಎಂ ಬೊಮ್ಮಾಯಿ ಭೇಟಿಯಾಗಿ ಮಾತುಕತೆ ನಡೆಸಿದ್ದರು.


Spread the love

About Laxminews 24x7

Check Also

ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ

Spread the love ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಕೊಳವಿ ಗ್ರಾಮದ ನಮ್ಮೂರ ಸರಕಾರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ