Breaking News

ಪ್ರವಚನ ನೀಡುತ್ತಲೇ ಪರಮಾತ್ಮನ ಪಾದ ಸೇರಿದ ಸ್ವಾಮೀಜಿ

Spread the love

ಗೋಕಾಕ : ಪ್ರವಚನ ಮಾಡುತ್ತಲೇ ಓರ್ವ ಸ್ವಾಮೀಜಿ, ಪರಮಾತ್ಮನ ಪಾದ ಸೇರಿದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಬಳೋಬಾಳ ಗ್ರಾಮದಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.

ತೀವೃ ಹೃದಯಾಘಾತದಿಂದ ಸ್ವಾಮೀಜಿಯವರು ಲಿಂಗೈಕ್ಯರಾಗಿರುವ ಬಗ್ಗೆ ವರದಿಯಾಗಿದ್ದು, ಹೃದಯಾಘಾತದಿಂದ ಲಿಂಗೈಕ್ಯರಾಗಿರುವ ಸ್ವಾಮಿಜಿಯವರನ್ನು ಬಸವಯೋಗ ಮಂಟಪ ಟ್ರಸ್ಟ್ ಸಂಗನಬಸವ ಮಹಾಸ್ವಾಮೀಜಿ (53) ಎಂದು ಹೇಳಲಾಗುತ್ತಿದೆ.

ಈ ಘಟನೆ ನವೆಂಬರ್ 6ನೇ ತಾರೀಕೂ ನಡೆದಿದ್ದರೂ ಸಹ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸ್ವಾಮಿಜಿ ನವೆಂಬರ್ 6 ರಂದು ತಮ್ಮದೇ ಹುಟ್ಟು ಹಬ್ಬ ಆಚರಿಸಿಕೊಂಡು ಆಶೀರ್ವಚನ ನೀಡುತ್ತಿದ್ದ ವೇಳೆ ಒಮ್ಮೇಲೆ ತೀವೃ ಹೃದಯಾಘಾತಕ್ಕೊಳಗಾಗಿ ಸ್ವಾಮಿಜಿ ಸ್ಥಳದಲ್ಲಿಯೆ ಮೃತಪಟ್ಟಿದ್ದಾರೆ.

ಹುಟ್ಟು ಹಬ್ಬದ ನಿಮಿತ್ಯ ಆಶೀರ್ವಚನ ನೀಡುತ್ತಿದ್ದ ವೇಳೆ ಹೃದಯಾಘಾತದಿಂದ ಸ್ವಾಮೀಜಿ ಲಿಂಗೈಕ್ಯರಾಗಿರುವ ಘಟನೆ ಮಠದ ಭಕ್ತರೊಬ್ಬರ ಮೊಬೈಲ್ ನಲ್ಲಿ ಸೆರೆಯಾಗಿದೆ.

 

 


Spread the love

About Laxminews 24x7

Check Also

ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ ‌ತನಿಖೆಯನ್ನು ನಡೆಸಬೇಕೆಂದು ಆಗ್ರಹಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘಗಳ ಮಹಾಸಂಘ ಪ್ರತಿಭಟನೆ

Spread the loveಬೆಳಗಾವಿ ;ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ