Breaking News

ವಿಚಾರಣೆಗೆ ಹಂಸಲೇಖ ಆಗಮನ; ಠಾಣೆ ಬಳಿ ಬೆಂಬಲಿಗರೊಂದಿಗೆ ನಟ ಚೇತನ್ ಧರಣಿ

Spread the love

ಬೆಂಗಳೂರು: ಪೇಜಾವರ ಶ್ರೀಗಳು ದಲಿತರ ಮನೆಗೆ ಹೋದಾಗ ಕೋಳಿ ತಿಂತಾರಾ? ಕುರಿ ರಕ್ತ ಹುರಿದು ಕೊಟ್ಟರೆ ತಿಂತಾರಾ? ಎಂದು ಪ್ರಶ್ನಿಸಿದ್ದ ಹಂಸಲೇಖಾ ಇಂದು ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾರೆ. ಇದ್ರ ಬೆನ್ನಲ್ಲೇ ಬೆಂಬಲಿಗರೊಂದಿಗೆ ಠಾಣೆಗೆ ಆಗಮಿಸಿದ ಚೇತನ್​ ಅವರನ್ನು ಇತರ ಪ್ರತಿಭಟನಾಕಾರರ ರೀತಿಯಲ್ಲೇ ತಡೆದಿದ್ದಾರೆ.  ಈ ವೇಳೆ ಆಕ್ರೋಶ ವ್ಯಕ್ತಪಡಿಸಿದ ಚೇತನ್ ತಮ್ಮ ಬೆಂಬಲಿಗರೊಂದಿಗೆ ಧರಣಿಗೆ ಕುಳಿತಿದ್ದಾರೆ.

ಈಗಾಗಲೇ ಎರಡು ಬಾರಿ ವಿಚಾರಣೆ ತಪ್ಪಿಸಿಕೊಂಡಿದ್ದ ಹಂಸಲೇಖ, ಇಂದು ನಗರದ ಬಸವನಗುಡಿ ಪೊಲೀಸ್​ ಠಾಣೆಗೆ ವಿಚಾರಣೆಗೆ ಆಗಮಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಠಾಣೆಗೆ ಬಿಗಿ ಪೊಲೀಸ್ ಬಂದೋಬಸ್ತ್ ಕೂಡ ಮಾಡಲಾಗಿದೆ. ಇನ್ನು ಹಂಸಲೇಖ ಪರ ಹಾಗೂ ವಿರೋಧ ಪ್ರತಿಭಟನೆ ನಡೆಯುತ್ತಿದ್ದು ಈ ಹಿನ್ನೆಲೆಯಲ್ಲಿ ಪೊಲೀಸರು ಮುಂಜಾಗೃತ ಕ್ರಮ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ