Breaking News

ಒಂದೇ ಕುಟುಂಬದ 11 ಸದಸ್ಯರು ವಿಷಪೂರಿತ ಆಹಾರ ಸೇವಿಸಿ ಅಸ್ವಸ್ಥ

Spread the love

ಖಾನಾಪುರ: ತಾಲ್ಲೂಕಿನ ಬಂಕಿ ಗ್ರಾಮದ ಒಂದೇ ಕುಟುಂಬದ 11 ಸದಸ್ಯರು ವಿಷಪೂರಿತ ಆಹಾರ ಸೇವಿಸಿ ಅಸ್ವಸ್ಥರಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಬೆಳಗಾವಿ
ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಾಹೀರ್ ಮಹಮ್ಮದ್ ಜಮಾದಾರ (14)
ಮೃತಪಟ್ಟಿದ್ದಾನೆ.
“ತೀವ್ರ ವಾಂತಿ ಮತ್ತು ಬೇಧಿಯಿಂದ ನಿತ್ರಾಣವಾಗಿದ್ದ ಸಾಹೀರ್ ಎಂಬ ಮಗುವನ್ನು ಹೆಚ್ಚಿನ
ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು, ಆತ ಚಿಕಿತ್ಸೆ ಫಲಿಸದೇ ಗುರುವಾರ
ಮೃತಪಟ್ಟಿದ್ದಾನೆ” ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸಂಜೀವ ನಾಂದ್ರೆ ಮಾಹಿತಿ
ನೀಡಿದರು.

ಈ ಘಟನೆಯ ಕುರಿತು ನಂದಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಮಾದಾರ ಕುಟುಂಬದ ಸದಸ್ಯರು ಮೂರು ದಿನಗಳ ತಮ್ಮ ಸಂಬಂಧಿಕರ ಮನೆಯಲ್ಲಿ ಔತಣಕೂಟ ಮುಗಿಸಿ ಮನೆಗೆ ಹಿಂದಿರುಗಿದ್ದರು. ಬಳಿಕ ಅವರ ಆರೋಗ್ಯದಲ್ಲಿ ಏರುಪೇರಾದ ಕಾರಣ ನಂದಗಡದ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.

ಜಮಾದಾರ ಕುಟುಂಬದ ಸದಸ್ಯರು ಸೇವಿಸಿದ ಆಹಾರದ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ವೈದ್ಯರು ಅವರೆಲ್ಲರೂ ಸೇವಿಸಿದ ಆಹಾರದಲ್ಲಿ ಇಲಿ, ಜಿರಳೆ ಅಥವಾ ಹಲ್ಲಿ ಬಿದ್ದಿರಬಹುದು ಎಂದು
ಶಂಕಿಸಿದ್ದಾರೆ.

ಆಹಾರಕ್ಕೆ ವಿಷ ಸೇರಿದ್ದರಿಂದ ಫುಡ್ ಪಾಯಿಸನ್ ಉಂಟಾಗಿದ್ದು, ಇದರಿಂದಾಗಿ ಓರ್ವ ಬಾಲಕ ಸಾವನ್ನಪ್ಪಿದ್ದಾನೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ