Breaking News

ಅಪರಿಚಿತ ವ್ಯಕ್ತಿಯ ಮೇಲೆ ವಾಹನಗಳು ಹರಿದ ಪರಿಣಾಮ ರಸ್ತೆಯಲ್ಲಿ ಕಿಲೋಮೀಟರ್ ಉದ್ದಕ್ಕೆ ಮೃತ ದೇಹದ ತುಂಡುಗಳು ಚೆಲ್ಲಾಪಿಲ್ಲಿಯಾಗಿವೆ. ಗುರುತು ಪತ್ತೆಯಾಗದಂತೆ ವ್ಯಕ್ತಿಯ ಶವ ನುಜ್ಜುಗುಜ್ಜಾಗಿದೆ.

Spread the love

ಬೆಂಗಳೂರು: ಅಪರಿಚಿತ ವ್ಯಕ್ತಿಯ ಮೇಲೆ ಹಲವು ವಾಹನಗಳು ಹರಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ರಾಯರಪಾಳ್ಯ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಭವಿಸಿದೆ.

ವಾಹನಗಳು ಹರಿದ ಹಿನ್ನೆಲೆ ವ್ಯಕ್ತಿ ದೇಹ ತುಂಡು ತುಂಡಾಗಿದೆ. ದೇಹದ ತುಂಡುಗಳು ರಸ್ತೆಗೆ ಅಂಟಿಕೊಂಡಿವೆ. ರಸ್ತೆಗೆ ಅಂಟಿಕೊಂಡ ಮಾಂಸದ ಚೂರುಗಳು ಸಂಗ್ರಹಿಸಿ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ.

ಅಪರಿಚಿತ ವ್ಯಕ್ತಿಯ ಮೇಲೆ ವಾಹನಗಳು ಹರಿದ ಪರಿಣಾಮ ರಸ್ತೆಯಲ್ಲಿ ಕಿಲೋಮೀಟರ್ ಉದ್ದಕ್ಕೆ ಮೃತ ದೇಹದ ತುಂಡುಗಳು ಚೆಲ್ಲಾಪಿಲ್ಲಿಯಾಗಿವೆ. ಗುರುತು ಪತ್ತೆಯಾಗದಂತೆ ವ್ಯಕ್ತಿಯ ಶವ ನುಜ್ಜುಗುಜ್ಜಾಗಿದೆ. ಕಬ್ಬಿಣದ ಸಲಾಕೆಗಳನ್ನ ಬಳಸಿ ಆಂಬುಲೆನ್ಸ್ ಸಿಬ್ಬಂದಿ ಮೃತ ದೇಹದ ತುಂಡುಗಳನ್ನು ಸಂಗ್ರಹಿಸಿದ್ದಾರೆ. ನಂತರ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ.

ಸವಾರರಿಬ್ಬರ ಸಾವು

2 ಬೈಕ್ ಮುಖಾಮುಖಿ ಡಿಕ್ಕಿಯಾಗಿ ಸವಾರರಿಬ್ಬರು ಸಾವನ್ನಪ್ಪಿದ್ದಾರೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಸಂತೆಬೆನ್ನೂರು ಮಂಗೇನಹಳ್ಳಿ ಬಳಿ ಈ ಘಟನೆ ನಡೆದಿದೆ. ಕಾರ್ತಿಕ್(21), ಅಭಿಷೇಕ್(20) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರ್ತಿಕ್ ಚನ್ನಗಿರಿ ತಣಿಗೆರೆ ಗ್ರಾಮದ ನಿವಾಸಿ. ಅಭಿಷೇಕ್ ಮೆದಿಕರೆ ಗ್ರಾಮದ ನಿವಾಸಿ ಅಂತ ತಿಳಿದುಬಂದಿದೆ. ಕಾರ್ತಿಕ್ ತಣಿಗೆರೆಯಿಂದ ಸಂತೆಬೆನ್ನೂರಿಗೆ ಹೋಗುತ್ತಿದ್ದಾಗ ಮತ್ತು ಅಭಿಷೇಕ್ ಸಂತೆಬೆನ್ನೂರು ಕಡೆಯಿಂದ ದಾವಣಗೆರೆ ಕಡೆ ಬರುತ್ತಿರುವಾಗ ಈ ದುರಂತ ನಡೆದಿದೆ.


Spread the love

About Laxminews 24x7

Check Also

ಸಿಎಂ ಬದಲಾವಣೆ ವಿಚಾರ: ಈ ವಿಚಾರವಾಗಿ ಬಾಯಿ ಮುಚ್ಚಿಕೊಂಡು ಇರಬೇಕು ಎಂದು ಖರ್ಗೆ ಆದೇಶವಿದೆ: ಮಧು ಬಂಗಾರಪ್ಪ

Spread the loveಗದಗ: “ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆಗಳು ರಾಜ್ಯ ರಾಜಕೀಯದಲ್ಲಿ ಮತ್ತೆ ಸದ್ದು ಮಾಡುತ್ತಿರುವ ಈ ಹೊತ್ತಿನಲ್ಲಿ, ಈ ಬಗ್ಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ