Breaking News

ರಮೇಶ್ ಜಾರಕಿಹೊಳಿ ಅವರು ದೆಹಲಿಯಲ್ಲಿ ಕಾಂಗ್ರೆಸ್ ಕೆಡವಲು ಫುಲ್ ಜೋರಾಗಿ ತಯಾರಿ ನಡೆಸಿದ ಸಾಹುಕಾರ

Spread the love

ನವದೆಹಲಿ –  ವಿಧಾನ ಪರಿಷತ್ ಚುನಾವಣೆಯಲ್ಲಿ ತಮ್ಮ ಸಹೋದರ, ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಪರ ಪ್ರಚಾರ ಮಾಡಲು ಬಿಜೆಪಿ ರಾಷ್ಟ್ರೀಯ ನಾಯಕರ ಅನುಮತಿ ಪಡೆಯಲು ಮಾಜಿ ಸಚಿವ ರಮೇಶ ಜಾರಕಿಹೊಳಿ ದೆಹಲಿಗೆ ತೆರಳಿದ್ದಾರೆ.

ಭಾನುವಾರ ಸಂಜೆ ವಿಧಾನಪರಿಷತ್ ಹಾಲಿ ಸದಸ್ಯ ವಿವೇಕರಾವ್ ಪಾಟೀಲ ಅವರೊಂದಿಗೆ ದೆಹಲಿ ತಲುಪಿರುವ ರಮೇಶ್, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ ಕಟೀಲ್ ಅವರನ್ನು ಭೇಟಿಯಾಗಿದ್ದಾರೆ.

ಈ ವೇಳೆ ನಳೀನ್ ಕುಮಾರ ಕಟೀಲ್ ಅವರಿಗೆ ವಿವೇಕರಾವ್ ಪಾಟೀಲ ಹೂ ಗುಚ್ಛ ಕೊಡುವ ಫೋಟೋ ಹೊರಬಿದ್ದಿದ್ದು, ವಿವೇಕರಾವ್ ಪಾಟೀಲ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೋ ಅಥವಾ ಈ ಸಂಬಂಧ ಮಾತುಕತೆ ನಡೆಯಿತೋ ಎನ್ನುವ ಮಾಹಿತಿ ಇನ್ನಷ್ಟೆ ಬರಬೇಕಿದೆ.

ವಿವೇಕರಾವ್ ಪಾಟೀಲ ಶೀಘ್ರ ಬಿಜೆಪಿ ಸೇರಲಿದ್ದಾರೆ ಎಂದು ರಮೇಶ ಜಾರಕಿಹೊಳಿ ಕೆಲವು ದಿನಗಳ ಹಿಂದೆ ಹೇಳಿಕೆ ನೀಡಿದ್ದರು.  ವಿವೇಕರಾವ್ ಪಾಟೀಲ ಕೂಡ ತಾಲು ಬಿಜೆಪಿ ಸೇರಲು ನಿರ್ಧರಿಸಿರುವುದನ್ನು ಖಚಿತಪಡಿಸಿದ್ದರು.

ರಮೇಶ ಜಾರಕಿಹೊಳಿ ಸೋಮವಾರ ಬಿಜೆಪಿ ವರಿಷ್ಟರನ್ನು ಭೇಟಿಯಾಗಿ ಲಖನ್ ಜಾರಕಿಹೊಳಿ ಅವರ ಪರವಾಗಿ ಅಧಿಕೃತವಾಗಿ ಪ್ರಚಾರ ಮಾಡಲು ಅನುಮತಿ ಕೇಳಲಿದ್ದಾರೆ.


Spread the love

About Laxminews 24x7

Check Also

ಅಗಷ್ಟ 29 ಮತ್ತು 30 ರಂದು ಹುಕ್ಕೇರಿ ಅವುಜಿಕರ ಮಠದ ಜಾತ್ರಾಮಹೋತ್ಸವ ಜರಗುವದು – ಮಂಜುನಾಥ ಮಹಾರಾಜ.

Spread the loveಹುಕ್ಕೇರಿ : ಅಗಷ್ಟ 29 ಮತ್ತು 30 ರಂದು ಹುಕ್ಕೇರಿ ಅವುಜಿಕರ ಮಠದ ಜಾತ್ರಾಮಹೋತ್ಸವ ಜರಗುವದು – …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ