Breaking News

ಗೆಳೆಯರಿಬ್ಬರ ನಡುವೆ ನಡೆದ ಜಗಳ ವಿಕೋಪಕ್ಕೆ ಹೋಗಿ, ಹೊಡೆದಾಟಕ್ಕೆ ತಿರುಗಿ ಓರ್ವನ ಕೊಲೆ

Spread the love

ಬೆಳಗಾವಿ – ಇಲ್ಲಿಯ ಶಹಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗೆಳೆಯರಿಬ್ಬರ ನಡುವೆ ನಡೆದ ಜಗಳ ವಿಕೋಪಕ್ಕೆ ಹೋಗಿ, ಹೊಡೆದಾಟಕ್ಕೆ ತಿರುಗಿ ಓರ್ವನ ಕೊಲೆಯಾಗಿದೆ.

ಭಾನುವಾರ ರಾತ್ರಿ 10.30ರ ಹೊತ್ತಿಗೆ ಘಟನೆ ನಡೆದಿದೆ.

ಗೆಳಯರಿಬ್ಬರು ಸೇರಿ ಸಾರಾಯಿ ಕುಡಿದು ಬರುವಾಗ ಮಾತಿಗೆ ಮಾತು ಬೆಳೆದು ಹೊಡೆದಾಡಿಕೊಂಡಿದ್ದಾರೆ. ಈ ವೇಳೆ ರಾಡ್ ನಿಂದ ಓರ್ವ ಇನ್ನೋರ್ವನ ತಲೆಗೆ ಹೊಡೆದಿದ್ದು, ಆತ ಅಲ್ಲಿಯೆ ಕುಸಿದು ಬಿದ್ದಿದ್ದಾನೆ. ನಂತರ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ ಬದುಕುಳಿಯಲಿಲ್ಲ.

ಸಾವಿಗೀಡಾದವನ ಹೆಸರು ಸೂರಜ್ ಎಂದು ಹೇಳಲಾಗಿದ್ದು, ಹೆಚ್ಚಿನ ಮಾಹಿತಿ ಬರಬೇಕಾಗಿದೆ. ಪೊಲೀಸರು ಸ್ಥಳಕ್ಕೆ ತೆರಳಿ ತನಿಖೆ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ