Breaking News

ಸಿದ್ದರಾಮಯ್ಯ ಬೆಂಗಾವಲು ವಾಹನ ಅಪಘಾತ – ಗಾಯಾಳುಗಳು ಆಸ್ಪತ್ರೆಗೆ ದಾಖಲು..!

Spread the love

ಚಿಕ್ಕಮಗಳೂರು : ಜಿಲ್ಲೆಯಲ್ಲಿ ನಡೆದ ಕಾಂಗ್ರೆಸ್ ಸಭೆಯ ನಂತರ ಶಿವಮೊಗ್ಗದತ್ತ ಹೊರಟಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾಗಿರುವ ಘಟನೆ ನಡೆದಿದೆ.

ಮಲ್ಲೇನಹಳ್ಳಿ ಹತ್ತಿರ ಈ ಘಟನೆ ನಡೆದಿದೆ. ಕಾರ್ಯಕ್ರಮ ಮುಗಿಸಿದ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.

ಶಿವಕುಮಾರ್ ಸೇರಿದಂತೆ ಹಲವು ನಾಯಕರು ಶಿವಮೊಗ್ಗದತ್ತ ಪ್ರಚಾರಕ್ಕಾಗಿ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಬೆಂಗಾವಲು ವಾಹನ ಅಪಘಾತಕ್ಕೆ ಈಡಾಗಿದೆ.

ಕೂಡಲೇ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಸ್ಥಳದಲ್ಲಿಯೇ ನಿಂತ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದರು. ವಾಹನದ ತಾಂತ್ರಿಕ ವೈಫಲ್ಯದಿಂದ ಸ್ಟೀರಿಂಗ್ ಜಾಮ್ ಆಗಿ ವಾಹನ ಚಾಲಕನ ನಿಯಂತ್ರಣ ಕಳೆದುಕೊಂಡು, ರಸ್ತೆ ಬದಿಯಲ್ಲಿನ ತೋಟಕ್ಕೆ ವಾಹನವನ್ನು ನುಗ್ಗಿಸಿದ್ದ ಎಂದು ಅಲ್ಲಿದ್ದ ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ


Spread the love

About Laxminews 24x7

Check Also

ಮೃತ ಸರ್ಕಾರಿ ವೈದ್ಯಾಧಿಕಾರಿ ಕೊಠಡಿಯಲ್ಲಿ ಮಾಟಮಂತ್ರ: ಸಾವಿನ ಸುತ್ತ ಅನುಮಾನದ ಹುತ್ತ

Spread the loveಕೋಲಾರ, ಜುಲೈ 07: ಜಿಲ್ಲೆ ಮಾಲೂರು ತಾಲ್ಲೂಕಿನ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವಸಂತ್ ಕುಮಾರ್ ಅವರು ತಮ್ಮ ಉತ್ತಮ ಸೇವೆಯಿಂದಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ