Breaking News

ಟೂರ್‍ಗೆ ಕರೆದುಕೊಂಡು ಹೋಗುವ ಪ್ರಶ್ನೆ ಇಲ್ಲ, ಕಾಂಗ್ರೆಸ್‍ನವರಿಗೆ ಅದು ಇಷ್ಟವಾಗದಿದ್ದರೆ ಮಿಲಿಟ್ರಿ ತಂದು ನಿಲ್ಲಿಸಿ ಚುನಾವಣೆ ಮಾಡಲಿ : ಬಾಲಚಂದ್ರ ಜಾರಕಿಹೊಳಿ

Spread the love

ಡಿಸೆಂಬರ್ 10ರಂದು ನಡೆಯಲಿರುವ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಇಂದು ಸಿಎಂ ಬೊಮ್ಮಾಯಿ ಬೆಳಗಾವಿ ತಾಲೂಕಿನಲ್ಲಿ ಖಾಸಗಿ ರೆಸಾರ್ಟ್‍ವೊಂದರಲ್ಲಿ ಸಭೆ ನಡೆಸಿದ್ದರು. ಈ ವೇಳೆ ಬೆಳಗಾವಿಯ ಎಲ್ಲಾ ಬಿಜೆಪಿ ಶಾಸಕರು, ಸಚಿವರು ಹಾಗೂ ಸಂಸದರು ಭಾಗಿಯಾಗಿದ್ದರು. ಈ ವೇಳೆ ಮುಖ್ಯಮಂತ್ರಿ ಬೊಮ್ಮಾಯಿಯವರು ಎಲ್ಲರೊಂದಿಗೆ ಸಭೆ ನಡೆಸಿದರು. ಆದರೆ ಈ ವೇಳೆ ಮುಖ್ಯಮಂತ್ರಿಗಳು ಮಾಜಿ ಸಚಿವ ರಮೇಶ ಜಾರಕಿಹೊಳಿ, ಸಚಿವ ಉಮೇಶ್ ಕತ್ತಿ ಹಾಗೂ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಜೊತೆಗೆ ಪ್ರತ್ಯೇಕ ಸಭೆ ನಡೆಸಿದ್ದಾರೆ. ಈಗ ಈ ಸಭೆ ನಡೆಸಿದ್ದು ಯಾಕೆ ಎನ್ನುವುದು ಎಲ್ಲರ ಕುತೂಹಲಕ್ಕೆ ಈಗ ಕಾರಣವಾಗಿದೆ. ಇನ್ನು ಈ ಗುಪ್ತ್ ಮೀಟಿಂಗ್ ಹಿಂದಿನ ಅಸಲಿಯತ್ತೇನು ಎಂಬುದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಇನ್ನು ಈ ಪ್ರತ್ಯೇಕ ಸಭೆಯಲ್ಲಿಯೂ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಗೆಲುವಿಗೆ ಶ್ರಮಿಸುವಂತೆ ಸಿಎಂ ಆಗ್ರಹಿಸಿದ್ದಾರೆ ಎನ್ನಲಾಗಿದೆ.

ಇನ್ನು ನಪ್ರತ್ಯೇಕ ಸಭೆಯ ಬಳಿಕ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ, ಈ ಚುನಾವಣೆಯು ಬಿಜೆಪಿ ವರ್ಸೆಸ್ ಜಾರಕಿಹೊಳಿ ಫ್ಯಾಮಿಲಿ ಅಲ್ಲ, ಬಿಜೆಪಿ ವರ್ಸೆಸ್ ಕಾಂಗ್ರೆಸ್ ಆಗಿ ನಡೆಯುತ್ತಿದೆ. ಈ ಮಧ್ಯೆ ಯಾವುದೇ ಫ್ಯಾಮಿಲಿ ವಿಚಾರಗಳನ್ನು ತರುವುದು ಬೇಡ. ಚುನಾವಣೆ ಇನ್ನೆರಡು ದಿನ. ಶಾಂತರಾಗಿರೋಣ. ದೇವರ ಆಶೀರ್ವಾದ ಇದ್ದವರು ಗೆಲ್ಲುತ್ತಾರೆ. ಇನ್ನು ನಾವೆಲ್ಲ ಟೀಂ ವರ್ಕ ಮಾಡುತ್ತಿದ್ದೇವೆ. ಹಾಗಾಗಿ ಚುನಾವಣೆಯಲ್ಲಿ ಗೆಲ್ಲುತ್ತೇವೆ.

ನ್ನು ಮತದಾರರನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗುತ್ತಾರಾ ಎನ್ನುವ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಇನ್ನೆರಡು ದಿನ ಮಾತ್ರ ಬಾಕಿ ಇದೆ. ಹಾಗಾಗಿ ಟೂರ್‍ಗೆ ಕರೆದುಕೊಂಡು ಹೋಗುವ ಪ್ರಶ್ನೆ ಇಲ್ಲ. ಪ್ರತೀ ಮತದಾನಕ್ಕೆ ವೀಡಿಯೋ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ನಾವೂ ಹೇಳಿದ್ದೇವೆ. ಇನ್ನು ಪೊಲೀಸರು ಚುನಾವಣೆ ವೇಳೆ ರಕ್ಷಣೆ ನೀಡಲಿದ್ದಾರೆ, ಇನ್ನು ಕಾಂಗ್ರೆಸ್‍ನವರಿಗೆ ಅದು ಇಷ್ಟವಾಗದಿದ್ದರೆ ಮಿಲಿಟ್ರಿ ತಂದು ನಿಲ್ಲಿಸಿ ಚುನಾವಣೆ ಮಾಡಲಿ ಎಂದರು.


Spread the love

About Laxminews 24x7

Check Also

ಒಂದು ಸಾವಿರ ಪಿಎಸ್ಐ ಹುದ್ದೆ ಖಾಲಿ, ಶೀಘ್ರವೇ ನೇಮಕಾತಿ: ಸಚಿವ ಪರಮೇಶ್ವರ್

Spread the loveಕೊಪ್ಪಳ: ಪಿಎಸ್ಐ ನೇಮಕಾತಿ ಹಗರಣದ ಬಳಿಕ ಐದು ವರ್ಷಗಳ ಕಾಲ ಯಾವುದೇ ಪೊಲೀಸ್ ನೇಮಕಾತಿ ಆಗಿಲ್ಲ. ಒಂದು ಸಾವಿರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ