Breaking News

10 ಲಕ್ಷ ರೈತರ ಖಾತೆಗೆ ಪರಿಹಾರ ಮೊತ್ತ ಜಮಾ: ಸಚಿವ ಅಶೋಕ್ ಮಾಹಿತಿ

Spread the love

ಬೆಂಗಳೂರು: 10 ಲಕ್ಷ ರೈತರಿಗೆ 681 ಕೋಟಿ ರೂಪಾಯಿ ಪರಿಹಾರ ನೀಡಲಾಗಿದೆ. ಮಳೆ ಮತ್ತು ಪ್ರವಾಹ ನಷ್ಟಕ್ಕೆ 1281 ಕೋಟಿ ರೂಪಾಯಿ ಪರಿಹಾರ ಕೋರಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ.

ಕಂದಾಯ ಸಚಿವ ಆರ್. ಅಶೋಕ್ ಈ ಬಗ್ಗೆ ಮಾಹಿತಿ ನೀಡಿದ್ದು, ಕಳೆದ ಮೂರು ತಿಂಗಳ ಅವಧಿಯಲ್ಲಿ ರಾಜ್ಯದಲ್ಲಿ 10.02 ಲಕ್ಷ ರೈತರಿಗೆ 681.90 ಕೋಟಿ ರೂಪಾಯಿ ಇನ್ ಪುಟ್ ಸಬ್ಸಿಡಿಯನ್ನು ನೇರವಾಗಿ ಖಾತೆಗೆ ಪಾವತಿಸಲಾಗಿದೆ ಎಂದು ಹೇಳಿದ್ದಾರೆ.

ಇಷ್ಟು ಕಡಿಮೆ ಅವಧಿಯಲ್ಲಿ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ರೈತರಿಗೆ ಪರಿಹಾರ ವಿತರಿಸಿರುವುದು ದಾಖಲೆಯಾಗಿದೆ.

ಬೆಳೆ ಪರಿಹಾರಕ್ಕೆ ನವೆಂಬರ್ 30 ರೊಳಗೆ ಅರ್ಜಿ ಸ್ವೀಕರಿಸಲು ಸೂಚನೆ ನೀಡಲಾಗಿತ್ತು. ಆದೇಶದಂತೆ ಅರ್ಜಿ ಸ್ವೀಕರಿಸಿ ಪರಿಹಾರ ವಿತರಿಸಲಾಗಿದೆ. 20 ದಿನದಲ್ಲಿ 560 ಕೋಟಿ ರೂಪಾಯಿ ಪರಿಹಾರ ನೀಡಲಾಗಿದೆ. ಹಿಂದೆ ತಿಂಗಳುಗಳೇ ಕಳೆದರೂ ರೈತರಿಗೆ ಪರಿಹಾರ ಸಿಗುತ್ತಿರಲಿಲ್ಲ. ಮಧ್ಯವರ್ತಿಗಳ ಹಾವಳಿ ಕೂಡ ಇತ್ತು. ಈಗ ರೈತರಿಗೆ ಅಲ್ಪಾವಧಿಯಲ್ಲೇ ಅವರ ಖಾತೆಗೆ ಪರಿಹಾರದ ಮೊತ್ತ ಜಮಾ ಮಾಡಲಾಗಿದೆ ಎಂದು ಹೇಳಲಾಗಿದೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ