Breaking News

ನಡು ರಸ್ತೆಯಲ್ಲೇ ಜೋಡು ಕುದುರೆ ರೇಸ್ ಆಯೋಜಿಸಿದವರ ಮೇಲೆ ಪೊಲೀಸರ ಲಘು ಲಾಠಿ ಚಾರ್ಜ್

Spread the love

ಬೆಳಗಾವಿ: ನಡು ರಸ್ತೆಯಲ್ಲೇ ಜೋಡು ಕುದುರೆ ರೇಸ್ ಆಯೋಜಿಸಿದವರ ಮೇಲೆ ಪೊಲೀಸರು ಲಘು ಲಾಠಿ ಚಾರ್ಜ್ ಮಾಡಿದ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಗೋಟೂರ ಗ್ರಾಮದಲ್ಲಿ ನಡೆದಿದೆ.

 

ಗ್ರಾಮದ ಶ್ರೀ ಲಕ್ಷ್ಮಿದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಕುದುರೆ ರೇಸ್​ ಅನ್ನು ಬೆಳಗಾವಿ-ಚಿಕ್ಕೋಡಿ ರಾಜ್ಯ ಹೆದ್ದಾರಿ ತಡೆದು ರೇಸ್ ಆಯೋಜನೆ ಮಾಡಲಾಗಿತ್ತು. ಇದರಿಂದಾಗಿ ಕೆಲ ಗಂಟೆಗಳ ಕಾಲ ರಾಜ್ಯ ಹೆದ್ದಾರಿ ಬಂದ್​ ಆಗಿ ಪ್ರಯಾಣಿಕರು ಕಿರಿಕಿರಿ ಅನುಭವಿಸುವಂತಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಜನರ ಮೇಲೆ ಲಘು ಲಾಠಿ ಪ್ರಹಾರ ನಡೆಸಿ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ