Breaking News

ಯಾರಿಗೇ ಆಗಲಿ ಬಲವಂತವಾಗಿ ಮತಾಂತರ ಮಾಡಿದ್ರೆ ಅದು ಕಾನೂನು ಮತ್ತು ವೈಯಕ್ತಿಕವಾಗಿ ವಿರೋಧ ಇದೆ ಎಂದ ಎಂ. ಎಲ್. ಸಿ ತಾರಾ

Spread the love

ಯಾರಿಗೇ ಆಗಲಿ ಬಲವಂತವಾಗಿ ಮತಾಂತರ ಮಾಡಿದ್ರೆ ಅದು ಕಾನೂನು ಮತ್ತು ವೈಯಕ್ತಿಕವಾಗಿ ವಿರೋಧ ಇದೆ ಎಂದು ಎಂ. ಎಲ್. ಸಿ ತಾರಾ ಹೇಳಿದ್ದಾರೆ.

ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು ಮತಾಂತರ ಅನ್ನೋದು ನಾವು ಹುಟ್ಟಿನಿಂದ ಬಂದ ಧರ್ಮವೇ ನಮ್ಮ ಧರ್ಮ ಆಗಿರುತ್ತದೆ
ಆದ್ರೆ ಯಾರದೋ ಬಲವಂತಕ್ಕಾಗಿ, ಅಥವಾ ಎಮೋಷನಲ್ ಬ್ಲಾಕ್ ಮೇಲ್ ಆಗಲಿ ಬೇರೆ ಬೇರೆ ಅನುಕೂಲ ಮಾಡೋದಾಗಿ ಆಸೆ ಆಮಿಷ ಒಡ್ಡಿ ಮತಾಂತರ ಮಾಡೋದು ಕಾನೂನು ವಿರುದ್ಧ ವಾಗಿದೆ ಎಂದರು. ಅಂತಹ ಕೆಲಸಕ್ಕೆ ಯಾರಾದ್ರೂ ಕೈಹಾಕಿದ್ರೆ ಅದು ಶಿಕ್ಷೆಗೆ ಅರ್ಹ ಅನ್ನೋದು ನಮ್ಮ ಆಸೆ. ಎಲ್ಲರಿಗೂ ವೈಯಕ್ತಿಕವಾದ ನಿರ್ಧಾರ ಇರುತ್ತೆ ಆದ್ರೆ ಯಾರದೋ ಬಲವಂತಕ್ಕೆ ಒಳಗಾಗಬಾರದು ಅನ್ನೋದು ಸರ್ಕಾರದ ಕಾಳಜಿ ಆಗಿದೆ ಎಂದರು. ಇನ್ನು ಕಾಂಗ್ರೆಸ್ ಪ್ರತಿಭಟನೆ ಮಾಡೋದು ಅವರ ವೈಯಕ್ತಿಕ ವಿಚಾರ. ಬಲವಂತವಾಗಿ ಮತಾಂತರ ಮಾಡುವವರ ವಿರುದ್ಧ ಈ ಕಾಯ್ದೆ ಜಾರಿ ಆಗುತ್ತಿದೆ ಎಂದರು.

ಯಾವುದೇ ಕುಟುಂಬ ಅಥವಾ ವೈಯಕ್ತಿಕವಾಗಿ ಸರ್ಕಾರ ಕೈಹಾಕಿಲ್ಲ ಈ ವಿಚಾರದಲ್ಲಿ ಎನ್ ಆರ್ ಐ ಗಳ ಕೈವಾಡ ಇದೆ. ಜೊತೆಗೆ ಬೇರೆ ಬೇರೆ ದೇಶಗಳ ಹಣ ಸಹಾಯ ಆಗ್ತಿದೆ ಅನ್ನೋ ಮಾಹಿತಿ ಇವೆ. ಆ ರೀತಿ ಇದ್ದರೂ ಇರಬಹುದು, ಮತಾಂತರ ಅದವರು ಯಾರೇ ಇರಲಿ ಅವರು ಮತ್ತೆ ಅವರ ಧರ್ಮಕ್ಕೆ ಹೋಗೋಕೆ ಸ್ವತಂತ್ರ ಇದೆ ಎಂದರು.

Spread the love

About Laxminews 24x7

Check Also

ರಸ್ತೆಗುಂಡಿ ಮುಚ್ಚಲು ನೀಡಿದ್ದ ಗಡುವು ಅಂತ್ಯ: ‘Please ask D.K.Shivakumar’ ಎಂದ ಸಿದ್ದರಾಮಯ್ಯ

Spread the loveಬೆಂಗಳೂರು: ರಾಜಧಾನಿಯಲ್ಲಿ ಹಾಳಾಗಿರುವ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಧಿಕಾರಿಗಳಿಗೆ ನೀಡಿದ್ದ ಗಡುವು ಇಂದಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ