Breaking News

ನಿರ್ದಿಷ್ಟ ಕಾಲಮಿತಿಯಲ್ಲಿ ನ್ಯಾಯ ಬೆಲೆ ಅಂಗಡಿಗೆ ಅನುಮತಿ: ಸಚಿವ ಉಮೇಶ್​​​ ಕತ್ತಿ

Spread the love

: ಕನಿಷ್ಟ 100 ರೇಷನ್ ಕಾರ್ಡ್ ಇರುವ ತಾಂಡಾ ಹಾಗೂ ಎಸ್​ಸಿ/ಎಸ್​ಟಿ ಕಾಲೋನಿಗಳಿಗೆ, ಅರ್ಜಿ ಸಲ್ಲಿಸಿದ ನಿಯಮಿತ ಕಾಲಮಿತಿಯಲ್ಲಿ ನ್ಯಾಯ ಬೆಲೆ ಅಂಗಡಿಗೆ ಅನುಮತಿ ನೀಡಲಾಗುವುದೆಂದು ಆಹಾರ ಸಚಿವ ಉಮೇಶ್ ಕತ್ತಿ ವಿಧಾನ ಪರಿಷತ್ತಿನಲ್ಲಿ ತಿಳಿಸಿದರು.

ತಾಂಡಾಗಳಲ್ಲಿ ನ್ಯಾಯ ಬೆಲೆ ಅಂಗಡಿ ಪ್ರಾರಂಭಿಸಲು ಅನುಮತಿ ನೀಡುವ ಕುರಿತು, ಪರಿಷತ್ ಕಲಾಪದಲ್ಲಿ ಪ್ರಕಾಶ ರಾಥೋಡ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಚಿವ ಉಮೇಶ್ ಕತ್ತಿ, ರಾಜ್ಯದ ತಾಂಡಾ ಹಾಗೂ ಆದಿವಾಸಿಗಳ ವಾಸ ಸ್ಥಳದಲ್ಲಿ ಕನಿಷ್ಟ 100 ರೇಷನ್ ಕಾರ್ಡ್ ಇದ್ದರೆ, ನ್ಯಾಯ ಬೆಲೆ ಅಂಗಡಿ ಪ್ರಾರಂಭಿಸಲು ಸೆಪ್ಟೆಂಬರ್​ 2021 ರಂದು ಆದೇಶ ಮಾಡಲಾಗಿತ್ತು. ಇದುವರೆಗೂ 376 ನ್ಯಾಯ ಬೆಲೆ ಅಂಗಡಿ ಪ್ರಾರಂಭಿಸಲು ಅನುಮತಿ ನೀಡಲಾಗಿದೆ. ಕನಿಷ್ಟ 100 ರೆಷನ್ ಕಾರ್ಡ್ ಇರುವ ತಾಂಡಾಗಳಿಗೆ ನ್ಯಾಯ ಬೆಲೆ ಅಂಗಡಿ ಪ್ರಾರಂಭಿಸಲು ಈಗಲೂ ಅನುಮತಿ ನೀಡಲಾಗುತ್ತಿದೆ ಎಂದು ಸದನಕ್ಕೆ ಉತ್ತರಿಸಿದರು.

ನ್ಯಾಯ ಬೆಲೆ ಅಂಗಡಿಗೆ ಅನುಮತಿ ನೀಡುವ ಅಧಿಕಾರವನ್ನ ಆಯಾ ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ. ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿದ 15 ದಿನಗಳಲ್ಲಿ ಅನುಮತಿ ನೀಡದ ಜಿಲ್ಲಾಧಿಕಾರಿ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದೆಂದು ಆಹಾರ ಸಚಿವ ಉಮೇಶ್ ಕತ್ತಿ ವಿಧಾನ ಪರಿಷತ್ ಕಲಾಪದಲ್ಲಿ ಸ್ಪಷ್ಟಪಡಿಸಿದರು.


Spread the love

About Laxminews 24x7

Check Also

ಟ್ರೆಂಡ್‌ ಗೀಳಿಗೆ ಬಿದ್ದು ಟ್ರ್ಯಾಪ್‌ ಆಗ್ಬೇಡಿ – 80s ಫೋಟೊ ಟ್ರೆಂಡ್‌ ಬಗ್ಗೆ ಪೊಲೀಸರ ಎಚ್ಚರಿಕೆ!

Spread the loveನೆಲಮಂಗಲ: ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಟ್ರೆಂಡ್ ಆಗುತ್ತಿರುವ 80ರ ದಶಕದ ಫೋಟೋ ಎಡಿಟಿಂಗ್ ಕುರಿತು ಸಾರ್ವಜನಿಕರು ಎಚ್ಚರಿಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ