Breaking News

ಕರಾವಳಿಯಲ್ಲಿ ಕೋಮು ಸಾಮರಸ್ಯ ಕೆಡಿಸುವವರ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ

Spread the love

ಬೆಳಗಾವಿ: ಕರಾವಳಿ ಜಿಲ್ಲೆಯಲ್ಲಿ, ಕೋಮು ಸೌಹಾರ್ದವನ್ನು ಕಲುಷಿತ ಗೊಳಿಸುವ, ಸಮಾಜ ವಿರೋಧಿ ಶಕ್ತಿಗಳನ್ನು ನಿರ್ದಾಕ್ಷಿಣ್ಯವಾಗಿ, ಬಗ್ಗು ಬಡಿಯಲಾಗುವುದು, ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ರವರು ಬುಧವಾರ ವಿಧಾನಸಭೆಯಲ್ಲಿ ತೀವ್ರ ಎಚ್ಚರಿಕೆ ನೀಡಿದ್ದಾರೆ.

 

ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ, ಕಾಂಗ್ರೆಸ್ ಸದಸ್ಯ ಯು ಟಿ ಖಾದರ್ ಅವರ ಪ್ರಶ್ನೆಗೆ ಉತ್ತರಿಸುತ್ತಿದ್ದ ಸಚಿವರು, “ಕರಾವಳಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಕೋಮು ಸಾಮರಸ್ಯ ವಾತಾವರಣವನ್ನು ಕೆಡಿಸುವ, ಕೆಲವರ, ಪ್ರಯತ್ನಗಳ ಬಗ್ಗೆ ವರದಿಗಳನ್ನು ಗಮನಿಸಿದ್ದೇನೆ, ಅವುಗಳಿಗೆ ನಿಯಂತ್ರಣ ಹೇರುವ ಬಗ್ಗೆ ಗಂಭೀರ ಪ್ರಯತ್ನ ನಡೆದಿದೆ” ಎಂದು ತಿಳಿಸಿದರು.

ಇತ್ತೀಚೆಗೆ, ಉಪ್ಪಿನಂಗಡಿ ಪಟ್ಟಣದಲ್ಲಿ ಪೊಲೀಸರ ಮೇಲೆಯೂ ಹಲ್ಲೆಯಾಗಿದೆ, ಸಾಮಾಜಿಕ ಜಾಲತಾಣ ವನ್ನು ದುರುಪಯೋಗ ಪಡಿಸಿಕೊಂಡು, ದೇಶ ವಿರೋಧಿ ಸಂದೇಶಗಳನ್ನು ಹರಿಬಿಡಲಾಗುತ್ತಿದೆ, ಎಂದ ಸಚಿವರು ” ಸ್ಥಳೀಯ ಪೊಲೀಸರು ಈ ಎಲ್ಲ ವಿದ್ಯಮಾನಗಳನ್ನು ಗಮನಿಸಿ ಕ್ರಮ ಕೈಗೊಂಡಿದ್ದಾರೆ, ಅವರ ಪ್ರಯತ್ನ ದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ” ಎಂದೂ ಸಚಿವರು ಹೇಳಿದರು.

ಇದಕ್ಕೆ ಮೊದಲು ವಿಷಯ ಪ್ರಸ್ತಾಪಿಸಿದ ಕಾಂಗ್ರೆಸ್ ಸದಸ್ಯ ಯು ಟಿ ಖಾದರ್, ಜಿಲ್ಲೆಯಲ್ಲಿ ಅನೈತಿಕ ಗೂಂಡಾಗಿರಿ ಪ್ರಕರಣಗಳು ಹೆಚ್ಚುತ್ತಿದ್ದು,ವಿದ್ಯಾರ್ಥಿಗಳ ಮೇಲೆ ಹಲ್ಲೆ ಘಟನೆಗಳು, ತ್ರಿಶೂಲ ದೀಕ್ಷೆಯಂತ ಕಾರ್ಯಕ್ರಮಗಳಿಂದ ಕೋಮು ಸೌಹಾರ್ದಕ್ಕೆ ಸವಾಲಾಗಿದೆ, ಪೊಲೀಸರಿಗೆ ಪರಿಸ್ಥಿತಿ ಎದುರಿಸಲು, ಮುಕ್ತ ಅವಕಾಶ ನೀಡಬೇಕು, ಎಂದು ಹೇಳಿದರು.


Spread the love

About Laxminews 24x7

Check Also

ಶಾಂತಾಯಿ ವೃದ್ಧಾಶ್ರಮಕ್ಕೆ ನಟ ಸಯ್ಯಾಜಿ ಶಿಂಧೆ ಭೇಟಿ

Spread the love ಶಾಂತಾಯಿ ವೃದ್ಧಾಶ್ರಮಕ್ಕೆ ನಟ ಸಯ್ಯಾಜಿ ಶಿಂಧೆ ಭೇಟಿ ಬಹುಭಾಷಾ ನಟ ಸಯ್ಯಾಜಿ ಶಿಂಧೆ ಅವರು ಬೆಳಗಾವಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ