Breaking News

ಹೊಳೆಗೆ ಬಿದ್ದ ಬಸ್ : ಕನಿಷ್ಠ 9 ಮಂದಿ ಸಾವು

Spread the love

ಪಶ್ಚಿಮ ಗೋದಾವರಿ: ಆಂಧ್ರಪ್ರದೇಶದ ಪಶ್ಚಿಮ ಗೋದಾವರಿಯಲ್ಲಿ ಬಸ್ ಹೊಳೆಗೆ ಬಿದ್ದು ಕನಿಷ್ಠ 9 ಮಂದಿ ಸಾವನ್ನಪ್ಪಿದ ಭೀಕರ ಅವಘಡ ಮಂಗಳವಾರ ನಡೆದಿದೆ.

ಜಂಗರೆಡ್ಡಿ ಎಂಬಲ್ಲಿ ಸೇತುವೆಯ ಮೇಲೆ ಎಪಿಎಸ್ ಆರ್‌ಟಿ ಯ ಬಸ್ ಅಪಘಾತಕ್ಕೆ ಗುರಿಯಾಗಿದ್ದು, ಹೊಳೆಗೆ ಬಿದ್ದು ದುರಂತ ಸಂಭವಿಸಿದೆ.

 

ಅವಘಡಕ್ಕೆ ಗುರಿಯಾಗುವ ಮೊದಲು ಬಸ್ಸಿನಲ್ಲಿ 26 ಮಂದಿ ಪ್ರಯಾಣಿಕರು ಇದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಸ್ಥಳೀಯರು ತುರ್ತು ಕಾರ್ಯಾಚರಣೆ ನಡೆಸಿ ಬಸ್ಸಿನಲ್ಲಿ ಸಿಕ್ಕ ಪ್ರಯಾಣಿಕರನ್ನು ಹೊರಗೆ ತೆಗೆದಿದ್ದಾರೆ. ಪೊಲೀಸರು, ಅಧಿಕಾರಿಗಳು ಘಟನಾ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಕ್ಕೆ ಕ್ರಮಕೈಗೊಂಡಿದ್ದಾರೆ.

ಅವಘಡಕ್ಕೆ ಕಾರಣವೇನೆಂದು ತಿಳಿದುಬಂದಿಲ್ಲ.

ಹೆಚ್ಚಿನ ವಿವರ ನೀರಿಕ್ಷಿಸಲಾಗುತ್ತಿದೆ.


Spread the love

About Laxminews 24x7

Check Also

ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ

Spread the love ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಕೊಳವಿ ಗ್ರಾಮದ ನಮ್ಮೂರ ಸರಕಾರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ