Breaking News

ರಾಜ್ಯದ ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ : ಜನವರಿ 1 ರಿಂದ ಬೆಂಬಲ ಬೆಲೆ ಯೋಜನೆಯಡಿ ಭತ್ತ,ರಾಗಿ, ಜೋಳ ಖರೀದಿ

Spread the love

ಬೆಳಗಾವಿ : ಹೊಸ ವರ್ಷಕ್ಕೆ ರೈತ ಸಮುದಾಯಕ್ಕೆ ರಾಜ್ಯ ಸರ್ಕಾರ ಸಿಹಿಸುದ್ದಿ (Good news for farmers) ನೀಡಿದ್ದು, ಜನವರಿ 1 ರಿಂದ (January 1) ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ, ರಾಗಿ, ಜೋಳ (Paddy, ragi, corn) ಖರೀದಿಸಲಾಗುವುದು ಎಂದು ಸಚಿವ ಉಮೇಶ್ ಕತ್ತಿ (Minister Umesh Kaththi) ಹೇಳಿದ್ದಾರೆ.

 

ಈ ಕುರಿತು ಮಾಹಿತಿ ನೀಡಿರುವ ಸಚಿವ ಉಮೇಶ್ ಕತ್ತಿ, ಬೆಂಬಲ ಬೆಲೆ ಯೋಜನೆಯಡಿ ಈಗಾಗಲೇ ನೋಂದಣಿ ಪ್ರಕ್ರಿಯೆ ಪ್ರಾರಂಭಿಸಲಾಗಿದ್ದು, ರೈತರು ತಮ್ಮ ಆಹಾರ ಧಾನ್ಯಗಳನ್ನು ಮಾರಾಟ ಮಾಡದೆ ಉಳಿಸಿಕೊಳ್ಳುವುದು ಉತ್ತಮ ಎಂದು ತಿಳಿಸಿದ್ದಾರೆ.

 

ನವೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ಭತ್ತದ ಕಟಾವು ವಿಳಂಬವಾಗಿದೆ. ಹೀಗಾಗಿ ಜನವರಿ 1 ರಿಂದ ಖರೀದಿ ಕೇಂದ್ರಗಳಲ್ಲಿ ಭತ್ತ ಖರೀದಿ ಆರಂಭವಾಗಲಿದೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ಯುವಜನೋತ್ಸವ 2025-26

Spread the love ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ಯುವಜನೋತ್ಸವ 2025-26 ಮೊಬೈಲ್ ಗೀಳಿನಿಂದ ಹೊರ ಬಂದು ಕ್ರೀಡೆ-ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿ; …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ