Breaking News

ವರ್ಗಾವಣೆಯ ನಿರೀಕ್ಷೆಯಲ್ಲಿರುವ ಪಿಯು ಉಪನ್ಯಾಸಕರಿಗೆ ಭರ್ಜರಿ ಗುಡ್ ನ್ಯೂಸ್

Spread the love

ಬೆಳಗಾವಿ : ವರ್ಗಾವಣೆಯ ನಿರೀಕ್ಷೆಯಲ್ಲಿದ್ದ ಪದವಿ ಪೂರ್ವ ಕಾಲೇಜು ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಪಿಯು ಕಾಲೇಜು ಉಪನ್ಯಾಸಕರ ವರ್ಗಾವಣೆಗೆ ಅವಕಾಶ ಕಲ್ಪಿಸವ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) ತಿದ್ದುಪಡಿ ವಿಧೇಯಕ 2021 ಅನ್ನು ರಾಜ್ಯ ಸರ್ಕಾರ ವಿಧಾನಸಭೆಯಲ್ಲಿ ಮಂಡಿಸಿದೆ.

 

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ತಿದ್ದುಪಡಿ ವಿಧೇಯಕ ಮಂಡಿಸಿದ್ದು, ವಿಧೇಯಕದಲ್ಲಿ ಪ್ರತಿ ವರ್ಷ ಶೇ. 10 ರಷ್ಟು ಪ್ರಮಾಣ ಮೀರದಂತೆ ಪಿಯು ಉಪನ್ಯಾಸಕರ ವರ್ಗಾವಣೆ ನಡೆಸಬೇಕು. ಆರಂಭಿಕ ನೇಮಕಾತಿ ಅಥವಾ ಬಡ್ತಿಯನ್ನು ಗ್ರಾಮೀಣ ಭಾಗದ ಕಾಲೇಜುಗಳಿಗೆ ಮಾಡಬೇಕು. ಶಿಕ್ಷಕರ ವರ್ಗಾವಣೆ ಮಾದರಿಯಲ್ಲೇ ಅರ್ಜಿ ಆಹ್ವಾನಿಸಿ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಕುರುಬಗಟ್ಟಿ ಗ್ರಾಮದಲ್ಲಿ ನೂತನವಾಗಿ ಸ್ಥಾಪಿಸಲಾದ ‘ಹಾಲು ಉತ್ಪಾದಕರ ಸಹಕಾರಿ ಸಂಘ’ದ ಉದ್ಘಾಟನಾ

Spread the love ಕುರುಬಗಟ್ಟಿ ಗ್ರಾಮದಲ್ಲಿ ನೂತನವಾಗಿ ಸ್ಥಾಪಿಸಲಾದ ‘ಹಾಲು ಉತ್ಪಾದಕರ ಸಹಕಾರಿ ಸಂಘ’ದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು, ಉದ್ಘಾಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ