Breaking News

ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ರಕ್ಷಣೆಗೆ ಬದ್ಧ, ಎಂಇಎಸ್ ಪುಂಡಾಟಿಕೆ ಸಹಿಸಲ್ಲ : ಸಿಎಂ ಬೊಮ್ಮಾಯಿ

Spread the love

ಬೆಳಗಾವಿ : ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ರಕ್ಷಣೆಗೆ ನಾವು ಸಿದ್ಧರಿದ್ದೇವೆ. ಗಡಿಯಲ್ಲಿ ಎಂಇಎಸ್ ಕಿಡಗೇಡಿಗಳ ಪುಂಡಾಟಿಕೆಯನ್ನು ನಾವು ಸಹಿಸಲ್ಲ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದರು.

MES attack on Kannadigas : ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ತಡರಾತ್ರಿ ನಡೆದ ಗಲಾಟೆಯ ಬಗ್ಗೆ ಸಂಪೂರ್ಣ ಮಾಹಿತಿ ನನಗಿದೆ. ಪೊಲೀಸರು ಎಲ್ಲ ರೀತಿಯ ಕಾನೂನು ಕ್ರಮಕೈಗೊಂಡಿದ್ದಾರೆ. ಎಂಇಎಸ್ ಬಗ್ಗೆ ಕಠಿಣ ನಿಲುವು ತೆದುಕೊಳ್ಳುತ್ತೇವೆ.

ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ಅಧಿಕಾರಿಗಳ ಮಟ್ಟದಲ್ಲಿ ಇಂದು ಚರ್ಚೆ ನಡೆಯಲಿದೆ. ಉಭಯ ರಾಜ್ಯಗಳ ಡಿಜಿ, ಗೃಹ ಇಲಾಖೆ ಕಾರ್ಯದರ್ಶಿ ಮಾತುಕತೆ ನಡೆಸಲಿದ್ದಾರೆ. ಅವಶ್ಯಕತೆ ಬಿದ್ದರೆ ನಾನು‌ ಮಹಾರಾಷ್ಟ್ರದ ಸಿಎಂ ಜತೆಗೆ ಮಾತನಾಡುತ್ತೇನೆ ಎಂದು ತಿಳಿಸಿದರು.

ಬೆಳಗಾವಿ ಎಂಇಎಸ್​​ ಗಲಾಟೆ : ಘಟನೆಯಲ್ಲಿ ಪೊಲೀಸ್ ವೈಫಲ್ಯದ ಪ್ರಶ್ನೆ ಇಲ್ಲ. ರಾತ್ರಿ ಬಂದು ಕಲ್ಲು ತೂರಾಟ ನಡೆಸಿದ್ದಾರೆ. ರಾತ್ರಿ ಗಲಾಟೆ ಮಾಡಿದ್ದು ಯಾವ ಪುರುಷಾರ್ಥ? ಈಗಾಗಲೇ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಗೃಹ ಸಚಿವರಿಗೆ ಗಲಾಟೆ ಬಗ್ಗೆ ಹಾಗೂ ತನಿಖೆ ಪ್ರಗತಿ ಬಗ್ಗೆ ಮಾಹಿತಿ ಪಡೆಯಲು ಸೂಚನೆ ನೀಡಿದ್ದೇನೆ ಎಂದರು.


Spread the love

About Laxminews 24x7

Check Also

ವರದಕ್ಷಿಣೆ ಕಿರುಕುಳ ಆರೋಪ, ಐಎಸ್‌ಡಿ ಡಿವೈಎಸ್‌ಪಿ ವಿರುದ್ಧ ಎಫ್ಐಆರ್

Spread the love ಬೆಂಗಳೂರು : ಡಿವೈಎಸ್‌ಪಿಯೊಬ್ಬರ ವಿರುದ್ಧ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. 41 ವರ್ಷದ ಮಹಿಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ