Breaking News

ರಾಜಕೀಯ ಹಿತಾಸಕ್ತಿಯಿಂದ ಮತಾಂತರ ನಿಷೇಧ ವಿಧೇಯಕವನ್ನು ತರಲಾಗುತ್ತಿದೆ: U. T.ಖಾದರ್

Spread the love

ಬೆಳಗಾವಿ,ಡಿ.23-ರಾಜಕೀಯ ಹಿತಾಸಕ್ತಿಯಿಂದ ಮತಾಂತರ ನಿಷೇಧ ವಿಧೇಯಕವನ್ನು ತರಲಾಗುತ್ತಿದೆ ಎಂದು ಮಾಜಿ ಸಚಿವ ಯು.ಟಿ.ಖಾದರ್ ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರಿಗೆ ಜನರ ಹಿತಾಸಕ್ತಿ ಬೇಕಾಗಿಲ್ಲ.

ಈ ಹಿಂದೆ ಗೋಹತ್ಯೆ ನಿಷೇಧ ಕಾಯ್ದೆ ತಂದರು. ಒಂದೂ ಗೋಶಾಲೆಯನ್ನೂ ಪ್ರಾರಂಭಿಸಿಲ್ಲ. ಈಗ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುತ್ತಿದ್ದಾರೆ ಎಂದು ಟೀಕಿಸಿದರು.

ಕಾನೂನು ಆಯೋಗ ಮಸೂದೆಯ ಕರಡನ್ನು ಕಳುಹಿಸಿದ್ದು ಸಂಪುಟ ಸಭೆಯಲ್ಲಿ ಚರ್ಚೆಯಾಗಿಲ್ಲ. ಸಂಪುಟ ಸಭೆಗೆ ತನ್ನಿ ಎಂದು ಸಹಿ ಹಾಕಿದ್ದೇ ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾಡಿದ್ದು ದೊಡ್ಡ ತಪ್ಪು ಎಂದು ಬಿಂಬಿಸುತ್ತಿದ್ದಾರೆ ಎಂದರು.

ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿ ಬದಲಾವಣೆ ಅವರ ಪಕ್ಷದ ಆಂತರಿಕ ವಿಚಾರ. ಐದು ವರ್ಷಗಳ ಕಾಲ ಆಡಳಿತ ನಡೆಸಬೇಕು. ಅಲ್ಲಿಯವರೆಗೆ ಅಕಾರವಿದೆ. ಆದರೆ ಪದೇ ಪದೇ ಮುಖ್ಯಮಂತ್ರಿ ಬದಲಾದರೆ ಆಡಳಿತದಲ್ಲಿ ಹಿಡಿತವಿರುವುದಿಲ್ಲ. ಈ ರೀತಿಯ ಹೇಳಿಕೆ ನೀಡುವುದರಿಂದ ಅಕಾರಿಗಳ ಮೇಲೆ ಹಿಡಿತ ಸಾಸಲು ಆಗುವುದಿಲ್ಲ ಎಂದು ಹೇಳಿದರು.


Spread the love

About Laxminews 24x7

Check Also

ಮತ್ತೆ ಪಾಚಿಕಟ್ಟಿದ ಸುವರ್ಣ ಸೌಧ:

Spread the loveಬೆಳಗಾವಿ: ಉತ್ತರ ಕರ್ನಾಟಕದ ಶಕ್ತಿ ಕೇಂದ್ರ ಬೆಳಗಾವಿಯ ಸುವರ್ಣ ವಿಧಾನಸೌಧ ಮತ್ತೆ ಪಾಚಿಕಟ್ಟಿದೆ. ಸ್ವಚ್ಛತೆಗೆ ಅನುದಾನ ಕೊರತೆ ಎದುರಾಗಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ