Breaking News

ಅಪ್ರಾಪ್ತರು, ಎಸ್,ಎಸಿ, ಎಸ್.ಟಿ ಸಮುದಾಯದವರ ಮತಾಂತರ ಮಾಡುವುದಕ್ಕೆ ಶಿಕ್ಷೆ ವಿಧಿಸಲಾಗುವುದು.

Spread the love

ಬೆಂಗಳೂರು : ವಿಧಾನಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆಯ ಬಗ್ಗೆ ಚರ್ಚೆ ನಡೆಯುತ್ತಿದ್ದು, ವಿಧೇಯಕದ ಬಗ್ಗೆ ಗೃಹ ಸಚಿವ ಅರಗ ಜ್ಞಾನೇಂದ್ರ (Minister Araga Gyanendra) ಮಾಹಿತಿ ನೀಡಿದ್ದಾರೆ.

ಅಪ್ರಾಪ್ತರು, ಎಸ್,ಎಸಿ, ಎಸ್.ಟಿ ಸಮುದಾಯದವರ ಮತಾಂತರ ಮಾಡುವುದಕ್ಕೆ ಶಿಕ್ಷೆ ವಿಧಿಸಲಾಗುವುದು.

ಬಲವಂತದ ಮತಾಂತರ ಮಾಡಿದರೆ ಶಿಕ್ಷೆ ಜೊತೆಗೆ ದಂಡ, ಬಲವಂತದ ಮತಾಂತರ ಮಾಡಿದರೆ 3 ರಿಂದ 10 ವರ್ಷ ಜೈಲು ಶಿಕ್ಷೆ, 50 ಸಾವಿರ ರೂ. ದಂಡ. ಸಾಮೂಹಿಕವಾಗಿ ಮತಾಂತರ ಮಾಡಿದರೆ 3 ರಿಂದ 10 ವರ್ಷ ಜೈಲು ಶಿಕ್ಷೆ, 1 ಲಕ್ಷ ರೂ. ದಂಡ ವಿಧಿಸಲಾಗುವುದು ಎಂದು ಹೇಳಿದ್ದಾರೆ.

ಮತಾಂತರವಾದ ವ್ಯಕ್ತಿ ತಮ್ಮ ಹಕ್ಕುಗಳನ್ನು ಕಳೆದುಕೊಳ್ಳುತ್ತಾರೆ. ಮೂಲ ಧರ್ಮದ ತಮ್ಮ ಹಕ್ಕುಗಳನ್ನು ಕಳೆದುಕೊಳ್ಳುತ್ತಾನೆ. ಈ ಬಗ್ಗೆ ಜಿಲ್ಲಾಧಿಕಾರಿಯೇ ದೃಢಪಡಿಸುತ್ತಾರೆ. ದೃಢಪಡಿಸಿದ ಬಳಿಕ ನಿರ್ದಿಷ್ಟ ಜಾತಿ ಬಗ್ಗೆ ಉಲ್ಲೇಖಿಸುತ್ತಾರೆ. ಅದಾದ ಬಳಿಕ ಆ ಜಾತಿಯಲ್ಲಿ ಅವರು ಮುಂದುವರಿಯಬಹುದು ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ವರದಕ್ಷಿಣೆ ಕಿರುಕುಳ ಆರೋಪ, ಐಎಸ್‌ಡಿ ಡಿವೈಎಸ್‌ಪಿ ವಿರುದ್ಧ ಎಫ್ಐಆರ್

Spread the love ಬೆಂಗಳೂರು : ಡಿವೈಎಸ್‌ಪಿಯೊಬ್ಬರ ವಿರುದ್ಧ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. 41 ವರ್ಷದ ಮಹಿಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ