Breaking News

ಕಾಂಗ್ರೆಸ್ ಸದಸ್ಯರ ಮಾತಿನಿಂದ ರಾಜೀನಾಮೆಗೆ ಮುಂದಾಗಿದ್ದೆ: ಸಭಾಪತಿ ಹೊರಟ್ಟಿ

Spread the love

ಬೆಳಗಾವಿಯ ಅಧಿವೇಶನದ ಕೊನೆಯ ದಿನ ಕಾಂಗ್ರೆಸ್ ಸದಸ್ಯರು ತಮ್ಮ ಕಚೇರಿಗೆ ಮುತ್ತಿಗೆ ಹಾಕಿ ಮಾತನಾಡಿದ ಪದಗಳು ನನಗೆ ಬೇಸರ ತರಿಸಿತ್ತು. ಇದರಿಂದಾಗಿ ನಾನು ರಾಜೀನಾಮೆಗೆ ಮುಂದಾಗಿದ್ದೆ ಎಂದು ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಮ್ಮ ಬೇಸರವನ್ನು ಹೊರ ಹಾಕಿದ್ದಾರೆ.

ಹುಬ್ಬಳ್ಳಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನಂತರ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಭಾಪತಿ ಬಸವರಾಜ್ ಹೊರಟ್ಟಿ ಅವರು ನನ್ನ 40 ವರ್ಷದ ರಾಜಕೀಯ ಜೀವನದಲ್ಲಿ ಈ ತರಹದ ಮಾತುಗಳನ್ನು ಎಂದಿಗೂ ಕೇಳಿರಲಿಲ್ಲ. ಆದರೆ ಕಾಂಗ್ರೆಸ್ ಸದಸ್ಯರು ನನ್ನ ತೇಜೋವಧೆಗೆ ಮುಂದಾಗಿದ್ದರು. ನನ್ನನ್ನು ಬಿಜೆಪಿ ಏಜೆಂಟ್ ಎಂದಿದ್ದರು. ಈ ಸಂಗತಿ ಬೇಸರ ತಂದಿತ್ತು. ಹೀಗಾಗಿ ನಾನು ರಾಜೀನಾಮೆಗೆ ಮುಂದಾಗಿದ್ದೆ. ನಂತರ ಕಾಂಗ್ರೆಸ್ ಸದಸ್ಯರ ಪರವಾಗಿ ಪರಿಷತ್‍ನ ವಿರೋಧ ಪಕ್ಷದ ಸಭಾನಾಯಕ ಎಸ್‍ಆರ್ ಪಾಟೀಲ್‍ರು ಕ್ಷಮೆ ಕೇಳಿದ್ದಾರೆ. ಹೀಗಾಗಿ ಪ್ರಕರಣ ಇತ್ಯರ್ಥವಾಗಿದೆ ಎಂದು ಸ್ಪಷ್ಟಪಡಿಸಿದರು.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ