Breaking News

ರೈತರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ಉಚಿತವಾಗಿ ಮನೆ ಬಾಗಿಲಿಗೆ ಪಹಣಿ, ನಕ್ಷೆ, RTC

Spread the love

ವಿಜಯಪುರ: ರಾಜ್ಯದಲ್ಲೆಡೆ ಆರ್.ಟಿ.ಸಿ. ಅಭಿಯಾನ ನಡೆಸಲಾಗುವುದು. ಒಂದೇ ದಿನ ರೈತರ ಮನೆ ಬಾಗಿಲಿಗೆ ಉಚಿತವಾಗಿ ಆರ್.ಟಿ.ಸಿ., ಪಹಣಿ, ಸ್ಕೆಚ್ ಕಾಪಿ ನೀಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.

ವಿಜಯಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರೈತರ ಜಮೀನುಗಳಿಗೆ ನ್ಯಾಯವಾದ ಬೆಲೆ ಒದಗಿಸಲು 79 /ಎ/ಬಿ ತೆಗೆದುಹಾಕಲಾಗಿದೆ.

ಒಂದೇ ದಿನದಲ್ಲಿ ಭೂ ಪರಿವರ್ತನೆ ಮಾಡಲು ನಿಯಮವನ್ನು ಸರಳಿಕರಣ ಮಾಡಲಾಗಿದೆ. ಒಂದೇ ದಿನ ರಾಜ್ಯದ ಸುಮಾರು 40 ಲಕ್ಷ ರೈತರ ಮನೆ ಬಾಗಿಲಿಗೆ ಉಚಿತವಾಗಿ ಆರ್.ಟಿ.ಸಿ. ನಕ್ಷೆ ಮತ್ತು ಪಹಣಿ ತಲುಪಿಸಲು ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದ್ದಾರೆ.

ಗ್ರಾಮ ವಾಸ್ತವ್ಯದ ಮೂಲಕ ಜಿಲ್ಲಾಧಿಕಾರಿಗಳು, ಉಪ ವಿಭಾಗಾಧಿಕಾರಿಗಳು ಸೇರಿದಂತೆ ಅಧಿಕಾರಿಗಳು ಗ್ರಾಮದಲ್ಲಿ ವಾಸ್ತವ್ಯ ಮಾಡಿ ಜನರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸುವ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ವರದಕ್ಷಿಣೆ ಕಿರುಕುಳ ಆರೋಪ, ಐಎಸ್‌ಡಿ ಡಿವೈಎಸ್‌ಪಿ ವಿರುದ್ಧ ಎಫ್ಐಆರ್

Spread the love ಬೆಂಗಳೂರು : ಡಿವೈಎಸ್‌ಪಿಯೊಬ್ಬರ ವಿರುದ್ಧ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. 41 ವರ್ಷದ ಮಹಿಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ