Breaking News

ರಾಜ್ಯದಲ್ಲಿ ‘ಶಾಲೆ ಹಂತದಲ್ಲಿಯೇ ‘ಮಕ್ಕಳಿಗೆ ಲಸಿಕೆ’ ನೀಡಿಕೆ – ಸಿಎಂ ಬೊಮ್ಮಾಯಿ

Spread the love

ಬೆಂಗಳೂರು: ಕೇಂದ್ರ ಸರ್ಕಾರ ಜನವರಿ 3ರಿಂದ 15-18 ವರ್ಷ ವಯಸ್ಸಿನ ಮಕ್ಕಳಿಗೆ ಲಸಿಕೆ ನೀಡಲು ಘೋಷಣೆ ಮಾಡಿದೆ. ರಾಜ್ಯದಲ್ಲಿ ಆಯಾ ಶಾಲಾ ಹಂತದಲ್ಲಿಯೇ ಮಕ್ಕಳಿಗೆ ಕೋವಿಡ್ ಲಸಿಕೆಯನ್ನು ನೀಡಲಾಗುತ್ತದೆ ಎಂಬುದಾಗಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

 

ಶಾಲೆಗಳಲ್ಲಿ ಲಸಿಕೆ ಅಭಿಯಾನ ಜನವರಿ 3 ರಿಂದ ಪ್ರಾರಂಭವಾಗಲಿದ್ದು, ಜನವರಿ 10 ರಿಂದ 60 ವರ್ಷಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ಸಹ-ಅಸ್ವಸ್ಥತೆಹೊಂದಿರುವ ಅರ್ಹರಿಗೆ ಇನ್ನೋಕ್ಯುಲೇಷನ್ ಶಿಬಿರಗಳು ಕೇಂದ್ರದ ನಿರ್ದೇಶನದಂತೆ ಪ್ರಾರಂಭವಾಗುತ್ತವೆ ಎಂದು ಹೇಳಿದರು.

ಈ ಬಗ್ಗೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಆಯಾ ಶಾಲೆಗಳಲ್ಲಿ ಲಸಿಕೆ ನೀಡುವ ಕುರಿತಂತೆ ಲಸಿಕಾ ಅಭಿಯಾನಗಳನ್ನು ಸಿದ್ಧಪಡಿಸುತ್ತಿದ್ದೇವೆ. 60 ವರ್ಷ ಮೇಲ್ಪಟ್ಟವರಿಗೆ ಸಹ-ಅಸ್ವಸ್ಥತೆ ಹೊಂದಿರುವವರಿಗೆ ‘ಮುನ್ನೆಚ್ಚರಿಕೆ ಡೋಸ್’ ನೀಡಲು ಸಿದ್ಧತೆ ನಡೆಸಲು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.

ಜನವರಿ 1, 2022ರಿಂದ 15-18 ವರ್ಷ ವಯಸ್ಸಿನ ಮಕ್ಕಳಿಗೆ ಲಸಿಕೆ ನೀಡುವ ಸಂಬಂಧ ಕೋವಿನ್ ಆಪ್ ನಲ್ಲಿ ನೋಂದಣಿ ಆರಂಭಗೊಳ್ಳಲಿದೆ. ಈ ಮೂಲಕ ಮಕ್ಕಳ ಪೋಷಕರು ಜನವರಿ 1 ರಿಂದ ಕೋವಿನ್ ಆಯಪ್ ನಲ್ಲಿ ನೋಂದಾಯಿಸಿಕೊಳ್ಳಬಹುದು.

ಈ ಬಗ್ಗೆ ಮಾಹಿತಿ ನೀಡಿರುವಂತ ಕೋವಿನ್ ಪ್ಲಾಟ್ ಫಾರ್ಮ್ ಮುಖ್ಯಸ್ಥ ಡಾ.ಆರ್.ಎಸ್ ಶರ್ಮಾ ಅವರು, 15-18 ವರ್ಷ ವಯಸ್ಸಿನ ಮಕ್ಕಳು ಜನವರಿ 1 ರಿಂದ ಕೋವಿನ್ ಆಯಪ್ ನಲ್ಲಿ ನೋಂದಾಯಿಸಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಶಾಲಾ ಗುರುತಿನ ಚೀಟಿಯೊಂದಿಗೆ ನೋಂದಣಿ ಮಾಡಬಹುದಾಗಿದೆ. ಇಲ್ಲವೇ ಆಧಾರ್ ಕಾರ್ಡ್ ಸಂಖ್ಯೆಯೊಂದಿಗೆಯೂ ನೋಂದಣಿ ಮಾಡಬಹುದಾಗಿದೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಮೃತ ಸರ್ಕಾರಿ ವೈದ್ಯಾಧಿಕಾರಿ ಕೊಠಡಿಯಲ್ಲಿ ಮಾಟಮಂತ್ರ: ಸಾವಿನ ಸುತ್ತ ಅನುಮಾನದ ಹುತ್ತ

Spread the loveಕೋಲಾರ, ಜುಲೈ 07: ಜಿಲ್ಲೆ ಮಾಲೂರು ತಾಲ್ಲೂಕಿನ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವಸಂತ್ ಕುಮಾರ್ ಅವರು ತಮ್ಮ ಉತ್ತಮ ಸೇವೆಯಿಂದಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ