Breaking News

ಮುಂದಿನ ಸಿಎಂ ಮುರಗೇಶ್ ನಿರಾಣಿ ಆಗಲಿ, ಬಾಳೆಹಣ್ಣಿನ ಮೇಲೆ ಬರೆದು ರಥಕ್ಕೆ ತೂರಿದ ಬಿಜೆಪಿಯ ಯುವ ಮುಖಂಡ

Spread the love

ವಿಜಯಪುರ: ಮುಂದಿನ ಸಿಎಂ ಮುರಗೇಶ್ ನಿರಾಣಿ ಆಗಲಿ ಎಂದು ಅಭಿಮಾನಿ ಹರಕೆ ಸಲ್ಲಿಸಿದ ಘಟನೆ ನಡೆದಿದೆ. ಅಭಿಮಾನಿಗಳು ಭೀಮಾಶಂಕರ ಮಹಾರಾಜರ ರಥೋತ್ಸವದಲ್ಲಿ ಬಾಳೆ ಹಣ್ಣಿನ ಮೇಲೆ ಮುಂದಿನ ಸಿಎಂ ಮುರಗೇಶ್ ನಿರಾಣಿ ಎಂದು ಬರೆದು ದೇವರ ಮೇಲೆ ಬಾಳೆ ಹಣ್ಣು ಎಸೆದು ಬೇಡಿಕೆ ಇಟ್ಟಿದ್ದಾರೆ.ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಮಂಗಳೂರು ಗ್ರಾಮದಲ್ಲಿ ಡಿಸೆಂಬರ್ 27ರಂದು ನಡೆದ ಭೀಮಾಶಂಕರ ಮಹಾರಾಜರ ರಥೋತ್ಸವದ ವೇಳೆ ಮುಂದಿನ ಸಿಎಂ ಮುರಗೇಶ್ ನಿರಾಣಿ ಎಂದು ಬಾಳೆ ಹಣ್ಣಿನ ಮೇಲೆ ಬರೆದು ಹರಕೆ ಮಾಡಿಕೊಂಡು ಬಾಳೆ ಹಣ್ಣನ್ನು ದೇವರ ಮೇಲೆ ತೂರಿದ್ದಾರೆ. ಬಿಜೆಪಿಯ ಯುವ ಮುಖಂಡ ಸಿದ್ದು ರೇವೂರ್ ಇಂತಹದೊಂದು ವಿಶೇಷ ಹರಕೆ ಮಾಡಿಕೊಂಡಿದ್ದಾರೆ. ಅದ್ದೂರಿ ರಥೋತ್ಸವಕ್ಕೆ ಸಾವಿರಾರು ಭಕ್ತ ವೃಂದ ಸಾಕ್ಷಿಯಾಗಿತ್ತು.

.


Spread the love

About Laxminews 24x7

Check Also

ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ ‌ತನಿಖೆಯನ್ನು ನಡೆಸಬೇಕೆಂದು ಆಗ್ರಹಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘಗಳ ಮಹಾಸಂಘ ಪ್ರತಿಭಟನೆ

Spread the loveಬೆಳಗಾವಿ ;ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ