ಬೆಂಗಳೂರು:ದ್ವಿತೀಯ ಪಿಯು ಪರೀಕ್ಷೆಗಳು ಪಠ್ಯಕ್ರಮ ಇನ್ನೂ ಪೂರ್ಣಗೊಳ್ಳದ ಕಾರಣ ಮಾರ್ಚ್ನಲ್ಲಿ ನಡೆಯಲಿರುವ ಪರೀಕ್ಷೆಗಳು ಏಪ್ರಿಲ್ ಕೊನೆಯ ವಾರಕ್ಕೆ ಮುಂದೂಡುವ ಸಾಧ್ಯತೆಯಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಂಗಳವಾರ ತಿಳಿಸಿದರು.
ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ , ಸಾಮಾನ್ಯ ಪ್ರವೇಶ ಪರೀಕ್ಷೆ ಮತ್ತು ವಿದ್ಯಾರ್ಥಿಗಳ ಇತರ ಪ್ರವೇಶ ಪರೀಕ್ಷೆಗಳ ವೇಳಾಪಟ್ಟಿಗಳ ಮೇಲೆ ಪರಿಣಾಮ ಬೀರುವುದರಿಂದ ಪರೀಕ್ಷೆಗಳನ್ನು ಏಪ್ರಿಲ್ನ ನಂತರ ವಿಳಂಬ ಮಾಡಲಾಗುವುದಿಲ್ಲ ಎಂದು ನಾಗೇಶ್ ವಿವರಿಸಿದರು.
ಇತ್ತೀಚೆಗಷ್ಟೇ ಮಾರ್ಚ್ನಲ್ಲಿ ಪರೀಕ್ಷೆಗಳು ನಿಗದಿಯಂತೆ ನಡೆಯಲಿವೆ ಎಂದು ಪಿಯು ಇಲಾಖೆ ಹೇಳಿಕೊಂಡಿತ್ತು. ಆದರೆ ಕೋವಿಡ್ ನಿರ್ಬಂಧಗಳಿಂದಾಗಿ ಪಠ್ಯಕ್ರಮವನ್ನು ಪೂರ್ಣಗೊಳಿಸಿಲ್ಲ ಎಂದು ಉಪನ್ಯಾಸಕರು ದೂರಿದ್ದಾರೆ.ಮುಂದೂಡಿಕೆ ಕುರಿತು ಔಪಚಾರಿಕ ಸುತ್ತೋಲೆ ಇನ್ನಷ್ಟೇ ಹೊರಬೀಳಬೇಕಿದೆ.