Home / ರಾಜಕೀಯ / ಮಗುವಿಗೆ ಪುನೀತ್​ ರಾಜ್​ಕುಮಾರ್​ ಎಂದು ಹೆಸರಿಟ್ಟ ದಂಪತಿ;

ಮಗುವಿಗೆ ಪುನೀತ್​ ರಾಜ್​ಕುಮಾರ್​ ಎಂದು ಹೆಸರಿಟ್ಟ ದಂಪತಿ;

Spread the love

ನಟ ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರನ್ನು ಪ್ರೀತಿಸುವ ಜನರ ಸಂಖ್ಯೆ ಅಪಾರ. ಆದರೆ ಇಂದು ಪುನೀತ್​ ನಮ್ಮ ಜೊತೆ ಇಲ್ಲ ಎಂಬ ಕೊರಗು ತೀವ್ರವಾಗಿದೆ. ಅದರ ನಡುವೆಯೂ ಕೆಲವು ವಿಶೇಷ ಘಟನೆಗಳು ವರದಿ ಆಗುತ್ತಿವೆ. ಪುನೀತ್​ ರಾಜ್​ಕುಮಾರ್​ ಅವರ ಹೆಸರನ್ನು ಅಮರವಾಗಿಸುವ ಕೆಲಸ ಎಲ್ಲೆಡೆ ನಡೆಯುತ್ತಿದೆ. ರಸ್ತೆ, ವೃತ್ತ, ಪಾರ್ಕ್​ ಮುಂತಾದ ಸಾರ್ವಜನಿಕ ಸ್ಥಳಗಳಿಗೆ ಪುನೀತ್​ ರಾಜ್​ಕುಮಾರ್​ ಹೆಸರನ್ನು ಇಡುವ ಕಾರ್ಯ ನಡೆದಿದೆ. ಈಗ ಕಲಬುರಗಿಯ (Kalaburagi) ದಂಪತಿಗಳು ತಮ್ಮ ಮಗುವಿಗೆ ಪುನೀತ್​ ರಾಜ್​ಕುಮಾರ್​ ಎಂದು ನಾಮಕರಣ ಮಾಡಿದ್ದಾರೆ. ಆ ಮೂಲಕ ಅಪ್ಪು ಮೇಲಿನ ಅಭಿಮಾನವನ್ನು ಮೆರೆದಿದ್ದಾರೆ. ಪುನೀತ್​ ಎಂದರೆ ಜನರಿಗೆ ಎಷ್ಟು ಇಷ್ಟ ಎಂಬುದಕ್ಕೆ ಇಂಥ ಘಟನೆಗಳೇ ಸಾಕ್ಷಿ. ಸದ್ಯ ಈ ದಂಪತಿ ಮತ್ತು ಮಗುವಿನ ಫೋಟೋ ವೈರಲ್​ ಆಗುತ್ತಿದೆ.

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಯಾತನೂರು ಗ್ರಾಮದ ಸಿದ್ದು ಮತ್ತು ಕಾವೇರಿ ದಂಪತಿಗೆ ಪುನೀತ್​ ರಾಜ್​ಕುಮಾರ್​ ಎಂದರೆ ಅಚ್ಚುಮೆಚ್ಚು. ಹಾಗಾಗಿ ತಮ್ಮ ಮೊದಲನೇ ಮಗುವಿಗೆ ಪುನೀತ್​ ರಾಜ್​ಕುಮಾರ್​ ಎಂದು ನಾಮಕರಣ ಮಾಡಿದ್ದಾರೆ. ಡಿ.5ರಂದು ಈ ಜೋಡಿಗೆ ಗಂಡು ಮಗು ಜನಿಸಿತು. ಹೆರಿಗೆಗೂ ಮುನ್ನವೇ ಅವರು ಈ ತೀರ್ಮಾನಕ್ಕೆ ಬಂದಿದ್ದರು. ಒಂದುವೇಳೆ ಗಂಡು ಮಗು ಜನಿಸಿದರೆ ಪುನೀತ್​ ರಾಜ್​ಕುಮಾರ್​ ಎಂದು ನಾಮಕರಣ ಮಾಡಲು ದಂಪತಿ ನಿರ್ಧರಿಸಿದ್ದರು. ಅವರ ಆಸೆ ನೆರವೇರಿದೆ.

ಅಪ್ಪು ಇಲ್ಲದೇ ಕಳೆಯಿತು ಎರಡು ತಿಂಗಳು:

ಪುನೀತ್​ ರಾಜ್​ಕುಮಾರ್​ ಅವರನ್ನು ಕಳೆದುಕೊಂಡಿದ್ದು ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟ. ಅವರು ಇಲ್ಲ ಎಂಬ ಸತ್ಯವನ್ನು ಒಪ್ಪಿಕೊಳ್ಳಲು ಯಾರಿಗೂ ಸಾಧ್ಯವಾಗುತ್ತಿಲ್ಲ. ಭೌತಿಕವಾಗಿ ಪುನೀತ್​ ನಮ್ಮೊಂದಿಗೆ ಇಲ್ಲದೇ ಇರಬಹುದು. ಆದರೆ ಅಭಿಮಾನಿಗಳ ಎದೆಯಲ್ಲಿ ಪುನೀತ್​ ಎಂದೆಂದಿಗೂ ಅಮರ. ಕಂಠೀರವ ಸ್ಡುಡಿಯೋ ಆವರಣದಲ್ಲಿ ಇರುವ ಅಪ್ಪು ಸಮಾಧಿಗೆ ಪ್ರತಿದಿನ ನೂರಾರು ಅಭಿಮಾನಿಗಳು ಭೇಟಿ ನೀಡುತ್ತಿದ್ದಾರೆ. ಪುನೀತ್​ ನಿಧನರಾಗಿ ಎರಡು ತಿಂಗಳು ಕಳೆದಿದ್ದರೂ ಕೂಡ ಸಮಾಧಿಗೆ ಭೇಟಿ ನೀಡುವ ಜನರ ಸಂಖ್ಯೆ ಕಡಿಮೆ ಆಗಿಲ್ಲ.

ಪುನೀತ್​ ನಿಧನರಾಗಿ ಎರಡು ತಿಂಗಳು ಕಳೆದ ಹಿನ್ನೆಲೆಯಲ್ಲಿ ಡಿ.29ರಂದು ಅವರ ಕುಟುಂಬದವರು ಬಂದು ಸಮಾಧಿಗೆ ಪೂಜೆ ಸಲ್ಲಿಸಿದ್ದರು. ಪುನೀತ್​ ಅವರ ಪ್ರೇರಣೆಯಿಂದ ಅನೇಕರು ನೇತ್ರದಾನ ಮಾಡುತ್ತಿದ್ದಾರೆ. ಆ ಮೂಲಕ ಅಪ್ಪು ಅಭಿಮಾನಿಗಳು ಎಲ್ಲರಿಗೂ ಮಾದರಿ ಆಗುತ್ತಿದ್ದಾರೆ. ಪುನೀತ್​ ನಿಧನದ ಬಳಿಕ ಜನರಲ್ಲಿ ನೇತ್ರದಾನದ ಬಗ್ಗೆ ಜಾಗೃತಿ ಹೆಚ್ಚಿದೆ. ನೇತ್ರದಾನಕ್ಕೆ ನೋಂದಣಿ ಮಾಡಿಕೊಳ್ಳುವವರ ಸಂಖ್ಯೆ ಗಣನೀಯವಾಗಿ ಹೆಚ್ಚಿರುವುದು ಸಂತಸದ ವಿಚಾರ.


Spread the love

About Laxminews 24x7

Check Also

ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಜಪಾನ್- ಇಂಗ್ಲೆಂಡ್‌ ಕಿಂತ ಮುಂದೆ ಭಾರತ ಇದೆ: ಮಾಜಿ ಸಚಿವ ಮುರಗೇಶ ನಿರಾಣಿ…!!

Spread the love ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಜಪಾನ್- ಇಂಗ್ಲೆಂಡ್‌ ಕಿಂತ ಮುಂದೆ ಭಾರತ ಇದೆ: ಮಾಜಿ ಸಚಿವ ಮುರಗೇಶ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ