Breaking News

ಮತ್ತೆ ಲಾಕ್​ಡೌನ್​ ಮಾಡುವ ದಿನ ಸಮೀಪಿಸುತ್ತಿದೆ, ಅಂತಿಮ ನಿರ್ಧಾರ ಸಿಎಂ ಕೈಯಲ್ಲಿ

Spread the love

ಮುಂಬೈ, ಜನವರಿ 1: ದೇಶದ ಒಂದೊಂದೇ ರಾಜ್ಯದಲ್ಲಿ ಮತ್ತೆ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಹೆಚ್ಚುತ್ತಿದ್ದು, ಇದರ ಜೊತೆಗೆ ಓಮಿಕ್ರಾನ್ ರೂಪಾಂತರಿ ವೈರಸ್ ಭೀತಿಯೂ ಕಾಡುತ್ತಿದೆ.

ಸದ್ಯ ಮಹಾರಾಷ್ಟ್ರ, ಕೇರಳ ಮತ್ತು ದೆಹಲಿಗಳಲ್ಲಿ ಕೊರೊನಾ ಸೋಂಕು ಪ್ರಮಾಣದಲ್ಲಿ ಗಣನೀಯ ಏರಿಕೆಯಾಗುತ್ತಿದ್ದು, ಮತ್ತೆ ಮೊದಲಿನಂತೆ ನಿರ್ಬಂಧ ವಿಧಿಸಲಾಗುತ್ತಿದೆ.

ಈ ನಡುವೆ ಮಹಾರಾಷ್ಟ್ರ ಸಚಿವರೊಬ್ಬರು ಮತ್ತೊಮ್ಮೆ ಲಾಕ್​ಡೌನ್ ಮಾಡುವ ಸೂಚನೆ ನೀಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಮಹಾರಾಷ್ಟ್ರ ಸಚಿವ ವಿಜಯ್ ವಡೆತ್ತಿವಾರ್, ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಮಿತಿಮೀರುತ್ತಿದೆ. ಮತ್ತೆ ಲಾಕ್‌ಡೌನ್​ ಹೇರುವ ಕಾಲ ಸಮೀಪಿಸುತ್ತಿದೆ. ಆದರೆ ಈ ಬಗ್ಗೆ ಅಂತಿಮವಾಗಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರೇ ನಿರ್ಣಯ ಮಾಡಲಿದ್ದಾರೆ ಎಂದು ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಕಳೆದ 11 ದಿನಗಳಿಂದಲೂ ಕೊವಿಡ್-​ 19 ಸೋಂಕಿತರ ಸಂಖ್ಯೆ ಏರುತ್ತಿದೆ. ದಿನದಲ್ಲಿ ದಾಖಲಾಗುವ ಪ್ರಕರಣ​ಗಳು ಹೆಚ್ಚುತ್ತಿವೆ. ಕೆಲವೇ ದಿನಗಳ ಹಿಂದೆ ಸರ್ಕಾರ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಮುಂಬೈನಲ್ಲಿ ಜನವರಿ 7ರವರೆಗೂ ಸೆಕ್ಷನ್​ 144 ಜಾರಿಯಲ್ಲಿದೆ.

ಇನ್ನು ಮಹಾರಾಷ್ಟ್ರದಾದ್ಯಂತ ಯಾವುದೇ ಸಾಮಾಜಿಕ, ರಾಜಕೀಯ, ಧಾರ್ಮಿಕ ಸಮಾರಂಭ ನಡೆಸಿದರೂ 50 ಜನ ಮಾತ್ರ ಸೇರಬಹುದು. ಅಂತ್ಯಸಂಸ್ಕಾರದಲ್ಲಿ ಗರಿಷ್ಠ 20 ಜನ ಪಾಲ್ಗೊಳ್ಳಬಹುದು ಎಂದು ನಿರ್ಬಂಧ ವಿಧಿಸಲಾಗಿದೆ.

ಹೊಸವರ್ಷದ ಮುನ್ನಾದಿನವೇ ಮುಂಬೈ ಪೊಲೀಸ್ ಆಯುಕ್ತರು ಸೆಕ್ಷನ್​ 144 ಹೇರಿದ್ದಾರೆ. ಕಡಲತೀರಗಳು, ತೆರೆದ ಮೈದಾನಗಳು, ಉದ್ಯಾನಗಳು ಮತ್ತು ಅಂಥ ಯಾವುದೇ ಸಾರ್ವಜನಿಕ ಸ್ಥಳಗಳಿಗೆ ಜನರು ಮುಂಜಾನೆ 5ರಿಂದ ಸಂಜೆ 5ರವರೆಗೆ ಭೇಟಿ ನೀಡುವುದನ್ನು ನಿರ್ಬಂಧಿಸಿದ್ದಾರೆ. ಈ ಆದೇಶ ಜನವರಿ 15ರವರೆಗೂ ಇರಲಿದೆ.

ಮಹಾರಾಷ್ಟ್ರದಲ್ಲಿ ಶುಕ್ರವಾರ ಒಂದೇ ದಿನ 8067 ಕೊರೊನಾ ಸೋಂಕು ಪ್ರರಕರಣ​ಗಳು ದಾಖಲಾಗಿವೆ. ಗುರುವಾರ 2699 ಪ್ರಕರಣಗಳು ದಾಖಲಾಗಿದ್ದವು. ಒಂದೇ ದಿನದಲ್ಲಿ 600ರಷ್ಟು ಹೆಚ್ಚಳಗೊಂಡಿದ್ದು, ಸಹಜವಾಗಿಯೇ ಆತಂಕ ಮೂಡಿಸಿದೆ.


Spread the love

About Laxminews 24x7

Check Also

ಭೂಮಿ‌ ಇರೋವರೆಗೂ ಬಸವಣ್ಣನವರ ವಿಚಾರಧಾರೆಗಳನ್ನ ಕಾಪಾಡಬೇಕು: ಬಸವ ಸಂಸ್ಕೃತಿ ಅಭಿಯಾನದಲ್ಲಿ ಸತೀಶ ಜಾರಕಿಹೊಳಿ

Spread the loveಬೆಳಗಾವಿ: “ಭೂಮಿ ಇರುವವರೆಗೆ ಬಸವಣ್ಣನವರ ವಿಚಾರಗಳನ್ನು ಕಾಪಾಡುವ ಪ್ರಯತ್ನ ಮಾಡಬೇಕಿದೆ. ದೇಶದಲ್ಲಿ ಮೂಲ ವಿಚಾರ ಮತ್ತು ಇತಿಹಾಸವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ