Breaking News

ಗುರುವಾರ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ: ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿ.?

Spread the love

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ( Bengaluru ) ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕೊರೋನಾ ಆರ್ಭಟಿಸುತ್ತಿದೆ. ಅದರಲ್ಲೂ ಬೆಂಗಳೂರಿನಲ್ಲಿ ಕೊರೋನಾ ಮಹಾಸ್ಪೋಟವೇ ದಿನದಿಂದ ದಿನಕ್ಕೆ, ವಾರದಿಂದ ವಾರಕ್ಕೆ ಹೆಚ್ಚಳವಾಗುತ್ತಿದೆ.

ಇದೇ ಕಾರಣದಿಂದಾಗಿ ನಾಳೆ ಸಿಎಂ ನೇತೃತ್ವದಲ್ಲಿ ತಜ್ಞರ ಸಭೆ, ಈ ಬಳಿಕ ಗುರುವಾರ ರಾಜ್ಯ ಸಚಿವ ಸಂಪುಟ ಸಭೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ( CM Basavaraj Bommai ) ನಡೆಸಲಿದ್ದಾರೆ. ಈ ಸಭೆಗಳಲ್ಲಿ ಬೆಂಗಳೂರು ಸೇರಿದಂತೆ ಕೊರೋನಾ ಹೆಚ್ಚಳದ ಪಾಸಿಟಿವಿಟಿ ದರ ಹೆಚ್ಚಳವಿರುವಂತ ಜಿಲ್ಲೆಗಳಲ್ಲಿ ಲಾಕ್ ಡೌನ್ ( Karnataka Lockdown ) ನಂತರ ಕಠಿಣ ರೂಲ್ಸ್ ಜಾರಿಯ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

ಕರುನಾಡಿಗೆ ಅಪ್ಪಳಿಸಿದ್ಯಾ ಕೊರೋನಾ 3ನೇ ಅಲೆ ( Covid19 3rd Wave ) ಎನ್ನುವ ಭಯವನ್ನು ಬೆಂಗಳೂರಿನ ಕೊರೋನಾ ಸೋಂಕಿನ ( Coronavirus ) ಪ್ರಕರಣಗಳ ಸಂಖ್ಯೆಯಿಂದ ಆತಂಕ ಮೂಡಿದೆ. ಇದೇ ಕಾರಣಕ್ಕಾಗಿ ನಾಳೆ ತಜ್ಞರ ನೇತೃತ್ವದಲ್ಲಿ ನಡೆಸಲಿರುವಂತ ಸಿಎಂ ಬಸವರಾಜ ಬೊಮ್ಮಾಯಿಯವರು, ಮಹತ್ವದ ನಿರ್ಧಾರದ ಕ್ರಮಗಳನ್ನು ಪ್ರಕಟಿಸಲಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ