Breaking News

ಶುಕ್ರವಾರ ರಾತ್ರಿ 10ರಿಂದಲೇ ಹೋಟೆಲ್ ಬಂದ್ ಮಾಡಲು ಜಿಲ್ಲಾಧಿಕಾರಿಗಳಿಗೆ ಸರ್ಕಾರದಿಂದ ಆದೇಶ;

Spread the love

ಬೆಂಗಳೂರು: ಕೊರೊನಾ ಮೂರನೇ ಅಲೆ ನಿಯಂತ್ರಿಸಲು ಸರ್ಕಾರ ರಾಜ್ಯದಲ್ಲಿ ಕಠಿಣ ನಿಯಮಗಳನ್ನ ಜಾರಿಗೆ ತಂದಿದೆ. ನಾಳೆ (ಶುಕ್ರವಾರ) ರಾತ್ರಿ 10ರಿಂದ ಸೋಮವಾರ ಬೆಳಿಗ್ಗೆ 10 5ರ ವರೆಗೆ ವೀಕೆಂಡ್ ಕರ್ಫ್ಯೂ ಇರಲಿದೆ. ಹೀಗಾಗಿ ನಾಳೆ ರಾತ್ರಿ 10ರಿಂದಲೇ ಹೋಟೆಲ್ ಬಂದ್ ಮಾಡಲು ಸರ್ಕಾರ ಆದೇಶ ನೀಡಿದೆ. ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸರ್ಕಾರ ಆದೇಶ ನೀಡಿದೆ. ಶುಕ್ರವಾರ ರಾತ್ರಿ 10 ಗಂಟೆಯಿಂದ ಎಲ್ಲ ಹೋಟೆಲ್​ಗಳು, ಪಬ್, ರೆಸ್ಟೋರೆಂಟ್ ಬಂದ್ ಮಾಡಲು ಸೂಚಿಸಿದೆ.

 

ಬಂದ್ ಮಾಡಿರುವ ಬಗ್ಗೆಯೂ ವರದಿ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದು, ಕಾಂಗ್ರೆಸ್ ಪಾದಯಾತ್ರೆಗೆ ಸಂಕಷ್ಟ ಎದುರಾಗಿದೆ. ಕಾಂಗ್ರೆಸ್ ಈಗಾಗಲೇ ಪಾದಯಾತ್ರೆಗೆ ಸುಮಾರು 3,000 ಕೊಠಡಿಗಳನ್ನ ಬುಕ್ ಮಾಡಿದೆ. ಆದರೆ ಸರ್ಕಾರ ಹೋಟೆಲ್ ಬಂದ್ ಮಾಡಬೇಕು ಅಂತ ತಿಳಿಸಿದೆ. ಸರ್ಕಾರದ ಈ ಆದೇಶಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗರಂ ಆಗಿದ್ದಾರೆ. ಪರ್ಯಾಯ ವ್ಯವಸ್ಥೆ ಮಾಡಲು ಕಾರ್ಯಕರ್ತರಿಗೆ ಸೂಚನೆ ನೀಡಲಾಗಿದೆ.


Spread the love

About Laxminews 24x7

Check Also

ಕಾರವಾರ ಕರಾವಳಿ ಉತ್ಸವದಲ್ಲಿ ಮಾನವೀಯತೆ ಮೆರುಗು: ಗಣ್ಯರಿಗಲ್ಲ, ವಿಶೇಷಚೇತನ ಮಕ್ಕಳಿಗೆ ಸಿಕ್ಕಿತು ‘ಹಾರುವ’ ಭಾಗ್ಯ!

Spread the loveಕಾರವಾರ: ಏಳು ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ಅರಬ್ಬಿ ಸಮುದ್ರತೀರದಲ್ಲಿ ನಡೆಯುತ್ತಿರುವ ‘ಕರಾವಳಿ ಉತ್ಸವ’ವು ಈ ಬಾರಿ ಕೇವಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ