ಬೆಳಗಾವಿ ನಗರದಲ್ಲಿ ಖಾಸಗಿ ಭಾಜಿ ಮಾರ್ಕೆಟ್ಗೆ ಅನುಮತಿ ನೀಡಿದ ಎಪಿಎಂಸಿ ಅಧಿಕಾರಿಗಳ ನಡೆಯನ್ನು ಪ್ರಶ್ನಿಸಿ ವಿವಿಧ ರೈತಪರ ಸಂಘಟನೆಗಳ ನಾಯಕರು ಹಾಗೂ ರೈತ ಮುಖಂಡರು ಸುದ್ದಿಗೋಷ್ಠಿಯನ್ನು ನಡೆಸಿದರು.
ಬೆಳಗಾವಿ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವ್ಯಾಪಾರಿ ಮುಖಂಡರು, ಸರಕಾರಿ ಆದೇಶದಂತೆ ಈಗಾಗಲೇ ಎಪಿಎಂಸಿ ನಮಗೆ ವಾರ್ಷಿಕ ಲೀಸ್ ಮೇಲೆ 132 ಅಂಗಡಿಗಳನ್ನು 20 ಲಕ್ಷದಿಂದ 1ಕೋಟಿ 5ಲಕ್ಷದವರೆಗೆ ಲೀಸ್ ಮೇಲೆ ವ್ಯಾಪಾರ ಮಾಡಲು ಅವಕಾಶ ನೀಡಿದೆ. ಅದರಂತೆ ವ್ಯಾಪಾರ ಮಾಡುತ್ತಿದ್ದೇವೆ. ಆದರೆ ಈಗ ಇದ್ದಕ್ಕಿಂದ್ದಂತೆ ಖಾಸಗಿ ಎಪಿಎಂಸಿಗೆ ಅಧಿಕಾರಿಗಳು ಅನುಮತಿ ನೀಡಿದ್ದಾರೆ. ಹಾಗಾಗಿ ಸರಕಾರಿ ಎಪಿಎಂಸಿಗಳಲ್ಲಿ ವ್ಯಪಾರ ನಡೆಸುವ ವ್ಯಾಪಾರಸ್ಥರಿಗೆ ಹಾಗೂ ರೈತರಿಗೆ ಅನಾನುಕೂಲವಾಗಿದೆ. ಈ ಕೂಡಲೇ ಖಾಸಗಿ ಎಪಿಎಂಸಿ ಲೈಸೆನ್ಸ್ನ್ನು ರದ್ದುಗೊಳಿಸಿ ಸರಕಾರಿ ಎಪಿಎಂಸಿಯಲ್ಲಿಯೇ ವ್ಯಾಪಾರ ವಹಿವಾಟು ನಡೆಯಬೇಕೆಂದು ಈ ವೇಳೆ ಒತ್ತಾಯಿಸಿದರು.
ಈ ವೇಳೆ ಮಾತನಾಡಿದ ಭಾರತೀಯ ಕೃಷಿಕ ಸಮಾಜದ ರಾಜ್ಯಾಧ್ಯಕ್ಷರಾದ ಸಿದಗೌಡ ಮೋದಗಿರವರು, ಸರಕಾರಿ ಎಪಿಎಂಸಿಯಲ್ಲಿ ಕಳೆದ ಎರಡು ವರ್ಷಗಳ ಹಿಂದೆ ಸರಕಾರ 135 ಅಂಗಡಿಗಳನ್ನು ನಿರ್ಮಾಣ ಮಾಡುವ ಮೂಲಕ ವ್ಯಪಾರಸ್ಥರಿಗೆ ಅನುಕೂಲ ಮಾಡಿಕೊಟ್ಟಿದೆ. ಆದರೆ ಈಗ ಮತ್ತೆ ನಗರದಲ್ಲಿ ಖಾಸಗಿ ಎಪಿಎಂಸಿ ಕಟ್ಟಡವನ್ನು ನಿರ್ಮಾಣ ಮಾಡುವಲ್ಲಿ ಸರಕಾರದ ನಿರ್ದೇಶಕ ಕರಿಗೌಡ ಮುತುವರ್ಜಿ ವಹಿಸಿದ್ದಾರೆ. ಹಾಗಾಗಿ ಈ ಕುರಿತಂತೆ ಸರಕಾರಿ ಅಧಿಕಾರಿಗಳು ತಪ್ಪು ಮಾಹಿತಿಯನ್ನು ಸರಕಾರಕ್ಕೆ ನೀಡಿದ್ದಾರೆ. ಇನ್ನು ಕೃಷಿ ಉತ್ಪನ್ನ ಮಾರುಕಟ್ಟೆ ಅಧಿಕಾರಿಗಳು ಖಾಸಗಿ ಎಪಿಎಂಸಿಗೆ ಅನುಮತಿ ನೀಡಬಾರದೆಂದು ಠರಾವು ಮಾಡಿಕೊಂಡು ಸಂಬಂಧಪಟ್ಟ ಅಧಿಕಾರಿಗಳಿಗೆ ಸಲ್ಲಿಸಲಾಗಿತ್ತು. ಆದರೆ ಈಗ ಅಧಿಕಾರಿಳು ಸರಖಾರಕ್ಕೆ ತಪ್ಪು ಮಾಹಿತಿಯನ್ನು ನೀಡಿದ್ದಾರೆ. ಹಾಗಾಗಿ ಇಲ್ಲಿ ನಡೆದಂತೆ ಪ್ರಮಾದಗಳಿಗೆ ಬೆಳಗಾವಿಯ ಉಪ ನಿರ್ದೇಶಕರು, ಕೃಷಿ ಮಾರಾಟ ಇಲಾಖೆ, ಎಪಿಎಂಸಿ ಕಮೀಟಿಯೇ ಇದಕ್ಕೆ ಕಾರಣ. ಮೂಲಭ ಸೌಲಭ್ಯಗಳನ್ನು ಕೊರತೆಯನ್ನು ತೋರಿಸಿ ಸರಕಾರಿ ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ಸರಕಾರಕ್ಕೆ ತಪ್ಪು ಮಾಹಿತಿಯನ್ನು ನೀಡಿ ಖಾಸಗಿ ಎಪಿಎಮ್ಸಿ ನಿರ್ಮಾಣಕ್ಕೆ ಕಾರಣರಾಗಿದ್ದಾರೆ. ನಾವು ರೈತರಿಗೆ ಒಳ್ಳೆಯದಾಗುವ ದೃಷ್ಟಿಯಿಂದ ನಾವು ಕಾನೂನು ಹೋರಾಟಕ್ಕೆ ಸಿದ್ದರಿದ್ದೇವೆ ಎಂದರು.