Breaking News

ಜಮೀನು ಪತ್ರವನ್ನು ರಿಜಿಸ್ಟರ್ ಮಾಡಲು ಲಂಚಕ್ಕಾಗಿ ಬೇಡಿಕೆ : ಸಬ್​ರಿಜಿಸ್ಟರ್​ಗೆ 4 ವರ್ಷ ಶಿಕ್ಷೆ

Spread the love

 

ತುಮಕೂರು: ಜಮೀನಿನ ದಾನ ಪತ್ರವನ್ನು ರಿಜಿಸ್ಟರ್ ಮಾಡಲು ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದ ಮಧುಗಿರಿ ಸಬ್ ರಿಜಿಸ್ಟರ್ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿಆರೋಪಿಗೆ ಕೋರ್ಟ್​ 4 ವರ್ಷ ಕಠಿಣ ಶಿಕ್ಷೆ ವಿಧಿಸಿದೆ.

 

ಸಬ್​ ರಿಜಿಸ್ಟರ್​ ರಾಮಚಂದ್ರಯ್ಯ ಎಂಬುವರಿಗೆ ತುಮಕೂರಿನ 7ನೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 4 ವರ್ಷ ಕಠಿಣ ಸಜೆ ಹಾಗೂ 8ಸಾವಿರ ರೂ. ದಂಡ ವಿಧಿಸಿ ಶುಕ್ರವಾರ ತೀರ್ಪು ನೀಡಿದೆ.

ಮಧುಗಿರಿ ತಾಲೂಕು ಚಿಕ್ಕ ಹೊಸಳ್ಳಿ ಗ್ರಾಮದ ವ್ಯಕ್ತಿಯೊಬ್ಬರ ಜಮೀನಿನ ದಾನ ಪತ್ರವನ್ನು ರಿಜಿಸ್ಟರ್ ಮಾಡಲು ಸಬ್ ರಿಜಿಸ್ಟರ್ 4000 ಲಂಚಕ್ಕಾಗಿ ಬೇಡಿಕೆ ಇರಿಸಿದ್ದರು. ಈ ಸಂಬಂಧ ಭ್ರಷ್ಟಾಚಾರ ನಿಗ್ರಹ ದಳದ ಡಿವೈಎಸ್ಪಿ ರಘುಕುಮಾರ್ ಪ್ರಕರಣ ದಾಖಲಿಸಿಕೊಂಡು ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಸಿದ್ದರು.

ಈ ಸಂಬಂಧ ವಿಚಾರಣೆ ನಡೆಸಿದ ನ್ಯಾಯಾಧೀಶ ಎಸ್ ಸುಧೀಂದ್ರ ನಾಥ್ ಆರೋಪಿ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.


Spread the love

About Laxminews 24x7

Check Also

ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲಿಗೆ ಬೀಗಮುದ್ರೆ ಈ ವರ್ಷ 25 ಲಕ್ಷಕ್ಕೂ ಅಧಿಕ ಭಕ್ತರಿಂದ ದರ್ಶನ

Spread the love ಹಾಸನ: ಕಳೆದ 15 ದಿನಗಳಿಂದ ದರ್ಶನ ನೀಡಿದ ಹಾಸನದ ಪ್ರಸಿದ್ಧ ಹಾಸನಾಂಬೆ ದೇವಿಯ ಗರ್ಭಗುಡಿಯ ಬಾಗಿಲನ್ನು ಶಾಸ್ತ್ರೋಕ್ತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ