Breaking News

ಹಿರಿಯ ಜಾನಪದ ಕಲಾವಿದ ಬಸಲಿಂಗಯ್ಯ ಹಿರೇಮಠ ನಿಧನ

Spread the love

ಧಾರವಾಡ: ಹಿರಿಯ ಜಾನಪದ ಕಲಾವಿದ ಬಸಲಿಂಗಯ್ಯ ಹಿರೇಮಠ(63) ಇಂದು ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಕಲಾವಿದ ಬಸಲಿಂಗಯ್ಯ, ಪತ್ನಿ, ಓರ್ವ ಪುತ್ರನನ್ನು ಅಗಲಿದ್ದಾರೆ.

Basalingayya Hiremath: ಹಿರಿಯ ಜಾನಪದ ಕಲಾವಿದ ಬಸಲಿಂಗಯ್ಯ ಹಿರೇಮಠ ನಿಧನ

ಜಾನಪದ ಕಲಾವಿದ ಬಸಲಿಂಗಯ್ಯ ಧಾರವಾಡದ ನಿವಾಸಿಯಾಗಿದ್ದರು. ಜಾನಪದ ಕ್ಷೇತ್ರದಲ್ಲಿ ಖ್ಯಾತಿ ಪಡೆದಿದ್ದರು. ಇವರ ಪತ್ನಿ ವಿಶ್ವೇಶ್ವರಿ ಹಿರೇಮಠ ಕೂಡ ಜಾನಪದ ಕಲಾವಿದೆಯಾಗಿದ್ದು ಜಾನಪದ ಸಂಶೋಧನಾ ಸಂಸ್ಥೆ ಮೂಲಕ ಬಸಲಿಂಗಯ್ಯ ಹಿರೇಮಠ ದಂಪತಿ ಕಲಾ ಸೇವೆ ಮಾಡುತ್ತಿದ್ದರು. ಅಲ್ಲದೇ ಅನೇಕ ಜಾನಪದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಬಸಲಿಂಗಯ್ಯ ಹಿರೇಮಠ ಕೊನೆಯುಸಿರೆಳೆದಿದ್ದು ಪತ್ನಿ, ಓರ್ವ ಪುತ್ರನನ್ನು ಅಗಲಿದ್ದಾರೆ.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ