Breaking News

ಮೇಕೆದಾಟು ಪಾದಯಾತ್ರೆಯಲ್ಲಿ ಶಿವರಾಜ್​ಕುಮಾರ್ ಭಾಗಿಯಾಗುತ್ತಾರೆ: ಉಮಾಶ್ರೀ,

Spread the love

ರಾಮನಗರ: ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್‌ನಿಂದ ಪಾದಯಾತ್ರೆ ನಡೆಸಲಾಗುತ್ತಿದೆ. ಪಾದಯಾತ್ರೆಯಲ್ಲಿ ಸ್ಯಾಂಡಲ್​ವುಡ್ ನಟ, ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಭಾಗಿಯಾಗುತ್ತಾರೆ. ನಿನ್ನೆಯೂ ಅರ್ಧ ದಾರಿಗೆ ಬಂದು ವಾಪಸ್ ಹೋಗಿದ್ದಾರೆ. ಇದು ಪಕ್ಷಾತೀತವಾಗಿ ನಡೆಯುತ್ತಿರುವ ಹೋರಾಟ. ಎಲ್ಲರೂ ಇದಕ್ಕೆ ಕೈ ಜೋಡಿಸಬೇಕು. ಬಿಜೆಪಿಯವರೇ ಇದರಲ್ಲಿ ರಾಜಕೀಯ ಮಾಡದೇ ಯೋಜನೆ ಜಾರಿ ಮಾಡಲಿ. ಈ ಪಾದಯಾತ್ರೆ ಯಶಸ್ವಿಯಾಗಿ ಸಾಗಲಿದೆ. ಕನ್ನಡ ಚಿತ್ರರಂಗ ಕೂಡ ಕೈ ಜೋಡಿಸಲಿದೆ ಎಂದು ಟಿವಿ9ಗೆ ಕಾಂಗ್ರೆಸ್ ಮುಖಂಡ ಮಧು ಬಂಗಾರಪ್ಪ ಹೇಳಿಕೆ ನೀಡಿದ್ದಾರೆ.

ಮೇಕೆದಾಟು ಯೋಜನೆಗಾಗಿ ನಡೆಯುತ್ತಿರುವ ಪಾದಯಾತ್ರೆಯಲ್ಲಿ ನಟ ಶಿವರಾಜ್​​ಕುಮಾರ್ ಭಾಗಿಯಾಗಲಿದ್ದಾರೆ ಎಂದು ಮಾಜಿ ಸಚಿವೆ ಉಮಾಶ್ರೀ ಕೂಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ನಮ್ಮ ಸ್ಯಾಂಡಲ್ ವುಡ್ ಸಂಪೂರ್ಣವಾಗಿ ಕೈ ಜೋಡಿಸಿದೆ. ಅಣೆಕಟ್ಟು ನಿರ್ಮಾಣವಾಗಲೇಬೇಕು. ಈ ಪಾದಯಾತ್ರೆಯಲ್ಲಿ ಜನರು ತೋರಿಸುತ್ತಿರುವ ಪ್ರೀತಿ ಸಹಕಾರ ತುಂಬಾ ದೊಡ್ಡದು. ಬೆಂಗಳೂರುವರೆಗೂ ಯಶಸ್ವಿಯಾಗಿ ಪಾದಯಾತ್ರೆ ಸಾಗಲಿದೆ. ಹೋರಾಟದ ಹೆಜ್ಜೆಗೆ ನಮ್ಮ ಮಹಿಳಾ ಶಕ್ತಿ ಕೂಡ ದೊಡ್ಡಮಟ್ಟದಲ್ಲೇ ಕೈ ಜೋಡಿಸಿದೆ ಎಂದು ಉಮಾಶ್ರೀ ಹೇಳಿದ್ದಾರೆ.


Spread the love

About Laxminews 24x7

Check Also

‘ನಮಗೆ ಡಿಜಿಪಿನೇ ಮೊಬೈಲ್ ಕೊಟ್ಟಿದ್ದು’: ಪರಪ್ಪನ ಅಗ್ರಹಾರದಲ್ಲಿ ಅಲೋಕ್ ಕುಮಾರ್ ಬಗ್ಗೆ ವಿಡಿಯೋ ಮಾಡಿದ್ದ ಕಿಡಿಗೇಡಿಗಳು.!

Spread the loveಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳು ಮೊಬೈಲ್ ಬಳಸಿ ವಿಡಿಯೋ ಮಾಡಿ ವೈರಲ್ ಮಾಡಿದ್ದು ಭದ್ರತಾ ಲೋಪವನ್ನು ಬಯಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ