Breaking News

ವಿದ್ಯಾರ್ಥಿನಿಯನ್ನು ಕಾರಿನಲ್ಲಿ ಕರೆದುಕೊಂಡು ಹೋಗಿ ಅತ್ಯಾಚಾರ

Spread the love

ಭದ್ರಾವತಿ ತಾಲೂಕಿನ‌ ಗ್ರಾಮವೊಂದರ ವಿದ್ಯಾರ್ಥಿನಿ ಇಂದು ಬೆಳಗ್ಗೆ ಶಾಲೆಗೆ ಹೋಗುವಾಗ ಮಾರುತಿ ಓಮಿನಿ ಕಾರಿನಲ್ಲಿ ಬಂದು ಆಕೆಯನ್ನು ಬಲವಂತವಾಗಿ ಕರೆದುಕೊಂಡು ಹೋಗಿ ದುಷ್ಕೃತ್ಯ ಎಸಗಲಾಗಿದೆ ಎಂದು ತಿಳಿದುಬಂದಿದೆ.

ವಿದ್ಯಾರ್ಥಿನಿಯನ್ನು ಕಾರಿನಲ್ಲಿ ತರೀಕೆರೆ ತನಕ ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಲಾಗಿದೆ ಎನ್ನಲಾಗಿದೆ. ನಂತರ ಬಾಲಕಿ ಪ್ರಜ್ಞೆ ತಪ್ಪಿದ್ದಾಳೆ. ಪ್ರಜ್ಞೆ ಬಂದಾಗ ವಿದ್ಯಾರ್ಥಿನಿಯೇ ಬಸ್‌ನಲ್ಲಿ ತನ್ನ ಮನೆಗೆ ವಾಪಸ್ ಆಗಿದ್ದಾಳೆ. ಪೋಷಕರು ಆಕೆಯ ಸ್ಥಿತಿ‌ಕಂಡು ವಿಚಾರಿಸಿ,‌ ನಂತರ ಪೊಲೀಸ್ ಠಾಣೆಗೆ ಕರೆದು‌ಕೊಂಡು ಹೋಗಿದ್ದಾರೆ.

ಭದ್ರಾವತಿಯ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿನಿಗೆ ಶಿವಮೊಗ್ಗದ ಸಖಿ ಕೇಂದ್ರದಲ್ಲಿ‌ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿಗೆ ಪೊಲೀಸರು ಬಲೆ‌ ಬೀಸಿದ್ದಾರೆ‌.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ