Breaking News

ಮಾರ್ಗ ಮಧ್ಯೆಯ ವ್ಯಕ್ತಿಯ ಬರ್ಬರ ಕೊಲೆ!

Spread the love

ಕಲಬುರಗಿ: ವ್ಯಕ್ತಿಯೊಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ, ಮುಖದ ಮೇಲೆ ಸೈಜುಗಲ್ಲು ಎತ್ತಿ ಹಾಕಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿತ್ತಾಪುರ – ರಾವೂರ ಮಾರ್ಗ ಮಧ್ಯೆಯ ಯರಗಾ ಕ್ರಾಸ್ ಬಳಿ ನಡೆದಿದೆ.

 

 ಕಲಬುರಗಿಯಲ್ಲಿ ಕೊಲೆಕೊಲೆಯಾದ ವ್ಯಕ್ತಿ ಅಂದಾಜು 45 ರಿಂದ 50 ವರ್ಷ ವಯಸ್ಸಿನ ಆಸುಪಾಸಿನವರಾಗಿದ್ದು, ಯಾರು? ಯಾವ ಊರಿನವರು? ಅನ್ನೋದು ಇನ್ನೂ ತಿಳಿದು ಬಂದಿಲ್ಲ. ಸ್ಥಳಕ್ಕೆ ವಾಡಿ ಠಾಣೆ ಪೊಲೀಸರು ಭೇಟಿ ನೀಡಿ, ತನಿಖೆ ಆರಂಭಿಸಿದ್ದಾರೆ.ರಕ್ತ ಇನ್ನೂ ಹಸಿಯಾಗಿದ್ದು, ನಸುಕಿನ ಜಾವ ಕೊಲೆ ನಡೆದಿರಬಹುದು ಎಂದು ಅಂದಾಜಿಸಲಾಗಿದೆ. ಕೊಲೆಗೆ ಕಾರಣ ಪೊಲೀಸರ ತನಿಖೆ ನಂತರ ತಿಳಿದು ಬರಬೇಕಿದೆ. ಯರಗಾ ಹಾಗೂ ರಾವೂರ ಹತ್ತಿರದಲ್ಲಿಯೇ ಘಟನೆ ನಡೆದಿರುವುದರಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ