Breaking News

ಜ್ಯದಲ್ಲಿ ‘ಲಾಕ್‌ಡೌನ್‌’ ಇಲ್ಲವೇ ಇಲ್ಲ : ಆರ್‌.ಸುಧಾಕರ್‌ |

Spread the love

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಏರಿಕೆಯಾಗುತ್ತಿರುವಂತ ಕೊರೋನಾ ಕೇಸ್ ಗಳಿಂದಾಗಿ ( Coronavirus Case ) ಮತ್ತೆ ಲಾಕ್ ಡೌನ್ ಆಗಲಿದೆ ಎನ್ನಲಾಗುತ್ತಿತ್ತು. ಆದ್ರೇ ಜನರು ಕೊರೋನಾ ಮಾರ್ಗಸೂಚಿ ( Covid-19 Guideline ) ಕ್ರಮಗಳನ್ನು ಅನುಸರಿಸಿ.

ಮಾಸ್ಕ್, ಸಾಮಾಜಿಕ ಅಂತರದಂತ ನಿಯಮ ಪಾಲಿಸಿ. ಸದ್ಯದ ಈಗಿನ ಆಸ್ಪತ್ರೆಗಳಿಗೆ ದಾಖಲಾಗುತ್ತಿರುವಂತ ಕೋವಿಡ್ ಸೋಂಕಿತರ ಪ್ರಮಾಣ ಗಮನಿಸಿದ್ರೇ.. ಲಾಕ್ ಡೌನ್ ( Lockdown ) ಮಾಡಿ ಕೊರೋನಾ ನಿಯಂತ್ರಣ ಮಾಡೋ ಪ್ರಮೇಯವಿಲ್ಲ ಎಂದು ಹೇಳುವ ಮೂಲಕ ರಾಜ್ಯದಲ್ಲಿ ಲಾಕ್ ಡೌನ್ ಇಲ್ಲವೇ ಇಲ್ಲ ಎಂಬುದಾಗಿ ಆರೋಗ್ಯ ಸಚಿವರು ತಿಳಿಸಿದ್ದಾರೆ.

 

ಈ ಕುರಿತಂತೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು, ಕೊರೋನಾ ಸೋಂಕಿನ ಪ್ರಮಾಣ ಫೆಬ್ರವರಿ ತಿಂಗಳಿನಲ್ಲಿ ಪೀಕ್ ಹಂತಕ್ಕೆ ತಲುಪಲಿದೆ ಎಂದು ತಜ್ಞರು ಹೇಳುತ್ತಿದ್ದಾರೆ. ಫೀಕ್ ಹಂತಕ್ಕೆ ತಲುಪಿದ ಬಳಿಕ 3-4 ವಾರಗಳಲ್ಲೇ ಕಡಿಮೆ ಆಗಲಿದೆ ಅಂತಾನೂ ತಿಳಿಸಿದ್ದಾರೆ. ಹೀಗಾಗಿ ಜನರು ಕೊರೋನಾ ನಿಯಂತ್ರಣ ಮಾರ್ಗಸೂಚಿ ಕ್ರಮಗಳನ್ನು ಅನುಸರಿಸುವಂತೆ ಮನವಿ ಮಾಡಿದರು.

 

ನಿನ್ನೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಎಲ್ಲಾ ರಾಜ್ಯಗಳ ಸಿಎಂ ಜೊತೆಗೆ ಕೊರೋನಾ, ಓಮಿಕ್ರಾನ್ ನಿಯಂತ್ರಣ ಸಂಬಂಧ ಸಭೆ ನಡೆಸಿದರು. ಈ ಸಭೆಯಲ್ಲಿ ಕೊರೋನಾ ನಿಯಂತ್ರಣಕ್ಕೆ ಲಾಕ್ ಡೌನ್ ಒಂದೇ ಮಾರ್ಗವಲ್ಲ ಎಂಬುದಾಗಿ ಅಭಿಪ್ರಾಯ ಪಟ್ಟಿದ್ದಾರೆ. ಹೆಚ್ಚು ಜನಜಂಗುಳಿ ಸೇರದಂತೆ, ಸಭೆ-ಸಮಾರಂಭಗಳನ್ನು ನಿಯಂತ್ರಿಸುವಂತೆ ಸೂಚಿಸಿದ್ದಾರೆ. ಈಗ ಸದ್ಯಕ್ಕೆ ಶೇ.5-6ರಷ್ಟು ಪ್ರಮಾಣದಲ್ಲಿ ಮಾತ್ರವೇ ಸೋಂಕಿತರು ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಈ ಎಲ್ಲಾ ಗಮನಿಸಿದ್ರೇ ಲಾಕ್ ಡೌನ್ ಮೂಲಕ ಕೊರೋನಾ ನಿಯಂತ್ರಣ ಸರಿಯಲ್ಲ ಎನಿಸಿತ್ತದೆ ಎಂದರು.


Spread the love

About Laxminews 24x7

Check Also

ರಾಜ್ಯದಲ್ಲಿ ಕ್ವಾಂಟಮ್‌ ಕ್ಷೇತ್ರದ ಅಭಿವೃದ್ದಿಗೆ ಸರಕಾರದಿಂದ ಹೆಚ್ಚಿನ ಸಹಕಾರ – ಶೀಘ್ರದಲ್ಲೇ ಕೈಗಾರಿಕೆ ಹಾಗೂ ಐಟಿಬಿಟಿ ಸಚಿವರೊಂದಿಗೆ ಸಭೆ: ಸಚಿವ ಎನ್‌ ಎಸ್‌ ಭೋಸರಾಜು

Spread the love ಬೆಂಗಳೂರು : ದೇಶದಲ್ಲೇ ಮೊದಲ ಕ್ವಾಂಟಮ್‌ ಕಂಪ್ಯೂಟರ್‌ ನಿರ್ಮಾಣದ ಮೂಲಕ ಕರ್ನಾಟಕ ರಾಜ್ಯ ದೇಶದಲ್ಲೇ ಪ್ರಥಮ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ