Breaking News

6 ವರ್ಷದ ಮಗನ ಜತೆ ತಡರಾತ್ರಿ ಗಂಡ ಆತ್ಮಹತ್ಯೆ! ಡೆತ್​ನೋಟ್​ನಲ್ಲಿದೆ ಪತ್ನಿ ಮತ್ತು ಎಲ್​ಐಸಿ ಏಜೆಂಟ್​ ಕೊಟ್ಟ ಕಾಟ.

Spread the love

ನಾಗಮಂಗಲ: 6 ವರ್ಷದ ಮಗನ ಜತೆ ತಡರಾತ್ರಿ ಕೆರೆಗೆ ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದು, ಮರುದಿನ ಬೆಳಗ್ಗೆ ಶವಗಳನ್ನು ಹೊರ ತೆಗೆಯುತ್ತಿದ್ದಂತೆ ಈತನ ಪತ್ನಿಯೂ ಕೆರೆಗೆ ಹಾರಿದ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬಿಂಡಿಗನವಿಲೆ ಹೋಬಳಿಯ ಪಿಟ್ಟೆಕೊಪ್ಪಲು ಗ್ರಾಮದಲ್ಲಿ ಸಂಭವಿಸಿದೆ.

ಸಾವಿಗೂ ಮುನ್ನ ಆತ ಬರೆದಿಟ್ಟಿದ್ದ ಡೆತ್​ನೋಟ್​ನಲ್ಲಿ ಪತ್ನಿ ಮತ್ತು ಮತ್ತೊಬ್ಬ ಪುರುಷನ ಹೆಸರಿದ್ದು, ಭಾರಿ ಚರ್ಚೆಗೆ ಗ್ರಾಸವಾಗಿದೆ.

ಪಿಟ್ಟೆಕೊಪ್ಪಲು ಗ್ರಾಮದ ಲೇಟ್​ ಬೋರೇಗೌಡರ ಮಗ ಗಂಗಾಧರಗೌಡ (36) ಮತ್ತು ಇವರ 6 ವರ್ಷದ ಪುತ್ರ ಜಸ್ಮಿತ್​ ಆತ್ಮಹತ್ಯೆ ಮಾಡಿಕೊಂಡವರು. ಗಂಗಾಧರಗೌಡಗೆ ಗಿರೀಶ ಎಂಬ ಮತ್ತೊಂದು ಹೆಸರಿದೆ. ಗುರುವಾರ ತಡರಾತ್ರಿ ಡೆತ್​ನೋಟ್​ ಬರೆದಿಟ್ಟ ಗಂಗಾಧರಗೌಡ, ಮಗನೊಂದಿಗೆ ಊರಿನ ಸಮೀಪದ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳದಲ್ಲಿ ಡೆತ್​ನೋಟ್​ ಪತ್ತೆಯಾಗಿದ್ದು, ‘ನನ್ನ ಹಾಗೂ ಮಗನ ಸಾವಿಗೆ ನನ್ನ ಪತ್ನಿ ಸಿಂಧು, ಎಲ್​ಐಸಿ ಏಜೆಂಟ್​ ಜಿ.ಸಿ.ನಂಜುಂಡೇಗೌಡ ಕಾರಣರು. ಇವರಿಬ್ಬರು ಕೊಟ್ಟಿರುವ ತೊಂದರೆಯನ್ನು ಹೇಳಲು ಕಷ್ಟವಾಗುತ್ತದೆ. ಇವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು’ ಎಂದು ಗಂಗಾಧರಗೌಡ ಬರೆದಿದ್ದಾರೆ.

ಸಿಂಧು ಹಾಗೂ ಗರುಡಾಪುರದ ಎಲ್​ಐಸಿ ಏಜೆಂಟ್​ ಜಿ.ಸಿ.ನಂಜುಂಡೇಗೌಡನ ನಡುವೆ ಕೆಲವರ್ಷಗಳಿಂದ ಅನೈತಿಕ ಸಂಬಂಧವಿತ್ತು ಎನ್ನಲಾಗಿದೆ. ಈ ಕುರಿತು ಅನೇಕ ಬಾರಿ ರಾಜಿ, ಸಂಧಾನಗಳು ನಡೆದಿದ್ದವು. ಈ ಇಬ್ಬರ ಮಾನಸಿಕ ಕಿರುಕುಳ ತಡೆಯಲಾರದೆ ಬೇಸತ್ತು ಮಗನೊಂದಿಗೆ ನೀರಿಗೆ ಬಿದ್ದು ಜೀವ ಕಳೆದುಕೊಂಡಿದ್ದಾರೆ ಎಂದು ಆರೋಪಿಸಿ ಮೃತನ ಸಹೋದರ ಬಿ.ಪಿ.ಮಂಜುನಾಥ ಪೊಲೀಸರಿಗೆ ದೂರು ನೀಡಿದ್ದಾರೆ.

 


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣದ ಮಾಸ್ಟರ್​​ ಮೈಂಡ್ ದಕ್ಷಿಣಕನ್ನಡ ಮಾಜಿ ಡಿಸಿ ಸಸಿಕಾಂತ್ ಸೆಂಥಿಲ್ ಎಂದು ಜನಾರ್ದನ ರೆಡ್ಡಿ ಗಂಭೀರ ಆರೋಪ

Spread the love ಬೆಂಗಳೂರು/ದಕ್ಷಿಣ ಕನ್ನಡ: “ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತರದ ಹಿಂದಿನ ಮಾಸ್ಟರ್​ ಮೈಂಡ್​​ ತಮಿಳುನಾಡಿನ ತಿರುವಲ್ಲೂರಿನ ಕಾಂಗ್ರೆಸ್​ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ