Breaking News

ಜನೇವರಿ 26 ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ರಾಜ್ಯದ ಸ್ತಬ್ಧಚಿತ್ರ

Spread the love

ನವದೆಹಲಿ-

 

ಕೊರೊನಾ ಪ್ರಕರಣಗಳು ದೇಶದಲ್ಲಿ ನಿರಂತರವಾಗಿ ಏರುಗತಿಯಲ್ಲಿ ಸಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜ.26ಕ್ಕೆ ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್‌ನ‌ಲ್ಲಿ ಕೇವಲ 24,000 ಜನರು ಮಾತ್ರ ಪಾಲ್ಗೊಳ್ಳಲು ಅನುಮತಿ ನೀಡಲಾಗಿದೆ.

 

ಕರ್ನಾಟಕ ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು ಎಂಬ ವಿಷಯಾಧಾರಿತ ರಾಜ್ಯದ ಸ್ತಬ್ಧಚಿತ್ರ ಸತತವಾಗಿ 13ನೇ ಬಾರಿ ರಾಜ್ಯದ ಸ್ತಬ್ಧಚಿತ್ರ ಆಯ್ಕೆಯಾಗಿದೆ, 12 ರಾಜ್ಯಗಳ ಪೈಕಿ ದಕ್ಷಿಣ ಭಾರತದಿಂದ ಆಯ್ಕೆಯಾದ ಏಕೈಕ ಸ್ತಬ್ಧಚಿತ್ರ ಕರ್ನಾಟಕದ್ದಾಗಿದೆ.

 

 

 

2021ರಲ್ಲಿ ಕರ್ನಾಟಕದ ವಿಜಯನಗರ ಸಾಮ್ರಾಜ್ಯದ ಸಾಂಸ್ಕೃತಿಕ ಮತ್ತು ಕಲಾ ಶ್ರೀಮಂತಿಕೆಯ ಸ್ತಬ್ಧಚಿತ್ರ ಭಾಗವಹಿತ್ತು.

 

 

 

ಜನವರಿ 26, 2022 ರಂದು ರಾಷ್ಟ್ರ ರಾಜಧಾನಿಯಲ್ಲಿ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಭಾಗವಹಿಸಲಿರುವ ಮಹಾರಾಷ್ಟ್ರದ ಪ್ರಸಿದ್ಧ ವಿಶ್ವ ನೈಸರ್ಗಿಕ ಪರಂಪರೆಯ ತಾಣವಾದ ಕಾಸ್ ಪ್ರಸ್ಥಭೂಮಿ ರಾಜ್ಯದ ಸ್ತಬ್ಧಚಿತ್ರ ವಾಗಿ ಭಾಗವಹಿಸಲಿದೆ.

 

ಸಮಾಜ ಸುಧಾರಕ ನಾರಾಯಣ ಗುರುಗಳ ಚಿತ್ರಣವಿರುವ ರಾಜ್ಯದ ಗಣರಾಜ್ಯೋತ್ಸವ ಪರೇಡ್ ಸ್ತಬ್ಧಚಿತ್ರ ಅನುಮತಿ ನಿರಾಕರಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಕೇರಳ ಸರ್ಕಾರ ಪ್ರತಿಭಟಿಸಿದೆ ಮತ್ತು ಕೇಂದ್ರದ ನಿರ್ಧಾರವನ್ನು ನೀವು ಒಪ್ಪುತ್ತೀರಾ ಎಂದು ಬಿಜೆಪಿಯ ರಾಜ್ಯ ಘಟಕವನ್ನು ಕೇಳಿದೆ.

 

 


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ