Breaking News

ರಾಜ್ಯದಲ್ಲಿ ಲಾಕ್​​​​ಡೌನ್ ಮಾಡುವ ಅವಶ್ಯಕತೆ ಇಲ್ಲ: ಸಚಿವ ಉಮೇಶ್​ ಕತ್ತಿ

Spread the love

ಹುಕ್ಕೇರಿ : ತಾಲೂಕಿನ ಪ್ರತಿ ಗ್ರಾಮ ಪಂಚಾಯಿತಿಗಳ ಕಸ ವಿಲೇವಾರಿ ವಾಹನಗಳಿಗೆ ಅರಣ್ಯ ಹಾಗೂ ಆಹಾರ ಇಲಾಖೆ ಸಚಿವ ಉಮೇಶ್ ಕತ್ತಿ ಚಾಲನೆ ನೀಡಿದರು.

ರಾಜ್ಯದಲ್ಲಿ ಲಾಕ್ಡೌ​ನ್ ಮಾಡುವ ಅವಶ್ಯಕತೆ ಇಲ್ಲ ಎಂದ ಸಚಿವ

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಉಮೇಶ್ ಕತ್ತಿ, 54 ಪಂಚಾಯಿತಿಗಳಿಗೆ ಕಸ ವಿಲೇಮಾರಿ ವಾಹನ ನೀಡಲಾಗುತ್ತಿದೆ. ಇದನ್ನ ಹುಕ್ಕೇರಿ ತಾಲೂಕಿನ ಜನ ಸದುಪಯೋಗ ಪಡಿಸಿಕೊಳ್ಳಬೇಕು. ಹುಕ್ಕೇರಿ ತಾಲೂಕು ಸ್ವಚ್ಛ ತಾಲೂಕು ಮಾಡಲು ಸಾರ್ವಜನಿಕರು ಸಹಕರಿಸಿದರೆ ಹುಕ್ಕೇರಿ ತಾಲೂಕು ನಂದನವನ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Minister Umesh Katti reaction, Minister Umesh Katti reaction on lockdown, Minister Umesh Katti news, ರಾಜ್ಯದಲ್ಲಿ ಲಾಕಡೌನ್ ಮಾಡುವ ಅವಶ್ಯಕತೆ ಇಲ್ಲ ಎಂದ ಉಮೇಶ್​ ಕತ್ತಿ, ಲಾಕ್​ಡೌನ್​ ಬಗ್ಗೆ ಸಚಿವ ಉಮೇಶ್​ ಕತ್ತಿ ಪ್ರತಿಕ್ರಿಯೆ, ಸಚಿವ ಉಮೇಶ್​ ಕತ್ತಿ ಸುದ್ದಿ,

ಕಸ ವಿಲೇವಾರಿ ವಾಹನಗಳಿಗೆ ಸಚಿವ ಉಮೇಶ್ ಕತ್ತಿ ಚಾಲನೆ

ಪ್ರತಿ ಕಸವಿಲೆವಾರಿ ವಾಹನಗಳು ಮಹಿಳಾ ಸ್ವ ಸಹಾಯ ಸಂಘದವರ ಅಡಿ ಕಾರ್ಯನಿರ್ವಹಿಸಲಿದ್ದು, ಮಹಿಳಾ ಸ್ವಸಹಾಯ ಸಂಘದಿಂದ ವಾಹನ ಚಾಲಕರನ್ನು ನೇಮಕ ಮಾಡಿಕೊಳ್ಳಲಾಗುವುದು. ಜೆ.ಜೆ.ಎಂ‌ ಯೋಜನೆ ಅಡಿ ಹುಕ್ಕೇರಿ ತಾಲೂಕಿನ ಪ್ರತಿ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಕೊಡುವ ಯೋಜನೆ ಜಾರಿಯಲ್ಲಿದೆ. ಶೀಘ್ರದಲ್ಲಿ ಹುಕ್ಕೇರಿ ಕ್ಷೇತ್ರದ ಪ್ರತಿ ಗ್ರಾಮಗಳಿಗೆ 24 ಗಂಟೆ ಕುಡಿಯುವ ನೀರು ದೊರೆಯಲಿದೆ. ಜನರಿಗೆ ಶುದ್ಧ ಕುಡಿಯುವ ನೀರು ಹಾಗೂ ಸ್ವಚ್ಛ ವಾತಾವರಣ ಕಲ್ಪಿಸುವುದು ನಮ್ಮ ಗುರಿ ಇದೆ ಎಂದರು.


Spread the love

About Laxminews 24x7

Check Also

ಪಾದಚಾರಿ ಮಹಿಳೆಯರಿಗೆ ಹಿಂಬದಿಯಿಂದ ಕಾರು ಡಿಕ್ಕಿ

Spread the loveದೇವನಹಳ್ಳಿ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಮಹಿಳೆಯರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ