Breaking News

ಕೊರೊನಾ ಪೀಕ್‍ಗೆ ಹೋಗುವ ಬಗ್ಗೆ ನಾಳಿನ ಸಭೆಯಲ್ಲಿ ಚರ್ಚಿಸುತ್ತೇವೆ: ಸಚಿವ ಬಿ.ಸಿ.ನಾಗೇಶ್

Spread the love

ಈಗಾಗಲೇ ಎಸ್‍ಎಸ್‍ಎಲ್‍ಸಿ, ಪಿಯುಸಿ ಪರೀಕ್ಷಾ ದಿನಾಂಕವನ್ನು ಘೋಷಣೆ ಮಾಡಿದ್ದೇವೆ. ಕೊರೊನಾ ಪೀಕ್‍ಗೆ ಹೋಗುತ್ತೆ ಎಂದು ಬಹಳ ಜನ ಮಾತನಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಏನು ಮಾಡಬೇಕು ಎಂಬ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ಚರ್ಚಿಸುತ್ತೇವೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟಪಡಿಸಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಬಿ.ಸಿ.ನಾಗೇಶ್ ತಾಂತ್ರಿಕ ಸಲಹಾ ಸಮಿತಿ ಒಂದು ವೇಳೆ ಅನುಮತಿ ಕೊಟ್ಟರೆ ಮಹಾನಗರಗಳಲ್ಲಿಯೂ ಶಾಲೆಗಳನ್ನು ಆರಂಭಿಸಲು ಪ್ರಯತ್ನಿಸುತ್ತೇವೆ. ನಾಳೆ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ನಾವು ಶಾಲೆಗಳಲ್ಲಿ ಆಗಿರುವ ಪಾಸಿಟಿವಿಟಿ ಬಗ್ಗೆ ಮಂಡನೆ ಮಾಡುತ್ತೇವೆ. ತಾಂತ್ರಿಕ ಸಮಿತಿ ಅಂತಿಮ ನಿರ್ಣಯ ಕೊಟ್ಟ ನಂತರ ಸಿಎಂ ಅವರ ಜೊತೆ ಮಾತನಾಡಿ ಮುಂದಿನ ನಿರ್ಣಯ ಕೈಗೊಳ್ಳುತ್ತೇವೆ ಎಂದರು.


Spread the love

About Laxminews 24x7

Check Also

ಕ್ಷಮೆ ಕೇಳಲಿ, ಇಲ್ಲವೇ ಸಾರ್ವಜನಿಕರ ಪ್ರತಿಭಟನೆ ಎದುರಿಸಬೇಕಾದೀತು: ಸಚಿವೆ ಹೆಬ್ಬಾಳ್ಕರ್

Spread the loveಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ