Breaking News

ಕೋವಿಡ್ 19: ಶಾಲೆಗಳಿಗೆ ನಿಯಮ ಪ್ರಕಟಿಸಿದ ರಾಜ್ಯ ಸರ್ಕಾರ

Spread the love

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ರಾಜ್ಯದ ಕೋವಿಡ್ 19 ಸ್ಥಿತಿಗತಿ ಕುರಿತು ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿದರು. ತಜ್ಞರ ವರದಿ ಸೇರಿದಂತೆ ಹಲವಾರು ವಿಚಾರಗಳ ಆಧಾರದಲ್ಲಿ ರಾಜ್ಯದಲ್ಲಿ ಜಾರಿಯಲ್ಲಿದ್ದ ವಾರಾಂತ್ಯದ ಕರ್ಫ್ಯೂವನ್ನು ತೆರವು ಮಾಡಲು ಸರ್ಕಾರ ನಿರ್ಧರಿಸಿದೆ.

 

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡೊದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ನಾಗೇಶ್, ಬೆಂಗಳೂರಿನಲ್ಲಿ ಜ.29ರವರೆಗೆ ಶಾಲೆಗಳನ್ನು ತೆರಯುವಂತಿಲ್ಲ. ಮುಂದಿನ ಶುಕ್ರವಾರ (ಜ.28)ದಂದು ಸಭೆ ನಡೆಸಿ ಮುಂದಿನ ನಿರ್ಧಾರ ಪ್ರಕಟಿಸುವುದಾಗಿ ಹೇಳಿದರು.

ಬೆಂಗಳೂರು ಬಿಟ್ಟು ಎಲ್ಲ ಕಡೆ ಶಾಲೆಯನ್ನು ಒಂದು ಯುನಿಟ್ ಎಂದು ಪರಿಗಣಿಸಲಾಗುವುದು. ಶಾಲೆಯಲ್ಲಿ ಕಡಿಮೆ ಪ್ರಕರಣ ಕಂಡು ಬಂದರೆ 3 ದಿನ ಬಂದ್, ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣ ಕಂಡುಬಂದರೆ ಏಳು ದಿನ ಬಂದ್ ಮಾಡಿ ಮತ್ತೆ ಆರಂಭವಾಗಲಿದೆ ಎಂದು ಹೇಳಿದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ