ರಾಯಚೂರು : ವ್ಯಕ್ತಿಯೊಬ್ಬ ಇರುವ ಚಟಗಳಿಗೆಲ್ಲ ದಾಸನಾಗಿದ್ದ. ಇದರಿಂದಾಗಿ ಸಾಕಷ್ಟು ಸಾಲ ಮಾಡಿಕೊಂಡು ಕೊನೆಗೆ ಮನೆಯನ್ನೇ ಮಾರಲು ಮುಂದಾಗಿದ್ದ. ಮಗನ ವರ್ತನೆಗೆ ಬೇಸತ್ತ ತಾಯಿ ಹಾಗೂ ಸಂಬಂಧಿಕರು ಕೊಲೆ ಮಾಡಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ಸಿರವಾರದಲ್ಲಿ ನಡೆದಿದ್ದು, ಅಮರೇಶ್(43) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.
ಈ ವ್ಯಕ್ತಿ ಇಸ್ಪೀಟ್ ಸೇರಿದಂತೆ ಮದ್ಯದ ವ್ಯಸನಿಯಾಗಿದ್ದ ಎನ್ನಲಾಗಿದೆ. ಹೀಗಾಗಿ ಕಂಡ ಕಂಡವರಲ್ಲಿ ಸಾಕಷ್ಟು ಸಾಲ ಮಾಡಿದ್ದ. ಸಾಲ ತೀರಿಸಲು ಆಗದೆ ಕೊನೆಗೆ ಮನೆಯನ್ನೇ ಮಾರಾಟಕ್ಕೆ ಇಟ್ಟಿದ್ದ ಎನ್ನಲಾಗಿದೆ.
ಈ ವಿಷಯವಾಗಿ ಮನೆಯಲ್ಲಿ ಈತನೊಂದಿಗೆ ಜಗಳ ಆರಂಭವಾಗಿದೆ. ಜಗಳ ವಿಕೋಪಕ್ಕೆ ತಿರುಗಿ ತಾಯಿ, ಆತನ ಸಹೋದರಿ ಹಾಗೂ ಭಾವ ಸೇರಿಕೊಂಡು ಕೊಲೆ ಮಾಡಿದ್ದಾರೆ ಎನ್ನಲಾಗಿದೆ.