Breaking News

ಮೂತ್ರ ವಿಸರ್ಜನೆಗೆಂದು ನಿಂತ ಕ್ಷಣಾರ್ಧದಲ್ಲೇ ಸ್ನೇಹಿತರಿಬ್ಬರ ಪ್ರಾಣ ಹೊತ್ತೊಯ್ದ ಜವರಾಯ!

Spread the love

ನೆಲಮಂಗಲ: ಜವರಾಯ ಯಾವಾಗ? ಯಾವ ರೂಪದಲ್ಲಿ ಬರ್ತಾನೆ ಎಂದು ಊಹಿಸೋಕು ಆಗಲ್ಲ. ಆಟೋ ಚಾಲಕರಿಬ್ಬರು ಮನೆಗೆ ಹೋಗುವ ಮಾರ್ಗಮಧ್ಯೆ ಮೂತ್ರ ವಿಸರ್ಜನೆಗೆಂದು ರಸ್ತೆಬದಿ ಆಟೋ ನಿಲ್ಲಿಸಿದ ಕ್ಷಣಾರ್ಧದಲ್ಲೇ ದುರಂತ ಅಂತ್ಯಕಂಡಿದ್ದಾರೆ.

ಇಂತಹ ಘಟನೆ ಬುಧವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ 75ರ ಮಹದೇವಪುರ ಬಳಿಯ ಚಾಕಲೇಟ್​ ಕಾರ್ಖಾನೆ ಬಳಿ ಸಂಭವಿಸಿದೆ.

ಚಕ್ಕಸಂದ್ರದ ರಮೇಶ್​(36) ಮತ್ತು ಅಡೇಪೇಟೆಯ ಉಮೇಶ್​ (35) ಮೃತ ದುರ್ದೈವಿಗಳು. ಸ್ನೇಹಿತರಾದ ಉಮೇಶ್​ ಮತ್ತು ರಮೇಶ್​ ಇಬ್ಬರೂ ಆಟೋ ಚಾಲಕರಾಗಿದ್ದರು. ಇವರಿಬ್ಬರೂ ಬುಧವಾರ ರಾತ್ರಿ 8 ಗಂಟೆಯಲ್ಲಿ ಸೋಲೂರಿಗೆ ಹೋಗಿದ್ದರು. ಅಂದು ರಾತ್ರಿ 10 ಗಂಟೆಗೆ ಗ್ರಾಮಕ್ಕೆ ವಾಪಸ್​ ಆಗುತ್ತಿದ್ದರು.

ಮಾರ್ಗ ಮಧ್ಯೆ ಮೂತ್ರವಿಸರ್ಜನೆಗೆಂದು ಚಾಕಲೇಟ್​ ಕಾರ್ಖಾನೆ ಬಳಿ ಆಟೋ ನಿಲ್ಲಿಸಿ ಕೆಳಗೆ ಇಳಿಯುತ್ತಿದ್ದರು. ಅಷ್ಟರಲ್ಲಿ ಕಾರಿನ ರೂಪದಲ್ಲಿ ಬಂದೆರಗಿದ ಜವರಾಯ, ರಮೇಶ್​ ಮತ್ತು ಉಮೇಶ್​ರ ಪ್ರಾಣ ತೆಗೆದಿದೆ.
ಕುಣಿಗಲ್​ ಕಡೆಯಿಂದ ವೇಗವಾಗಿ ಬಂದ ಕಾರು, ರಸ್ತೆಬದಿ ನಿಂತಿದ್ದ ಆಟೋಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ರಮೇಶ್​ ಹಾಗೂ ಉಮೇಶ್​ ತಲೆಗೆ ಗಂಭೀರ ಗಾಯವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.


Spread the love

About Laxminews 24x7

Check Also

ವೃದ್ಧಾಶ್ರಮದಲ್ಲಿ ಆತ್ಮಹತ್ಯೆಗೆ ಶರಣಾದ ದಂಪತಿ

Spread the loveಬೆಂಗಳೂರು: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ದಂಪತಿ ವೃದ್ದಾಶ್ರಮದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ಮಂಗಳವಾರ ಬೆಳಗ್ಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ